ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಕೆಲಸಕ್ಕೆ ಹೋಗಿಲ್ಲ ಎಂಬ ಕಾರಣಕ್ಕೆ ಪತ್ನಿಯನ್ನು ಪೆಟ್ರೋಲ್ (Petrol) ಹಾಕಿ ಸುಟ್ಟು ಕೊಲ್ಲಲು ಪ್ರಯತ್ನಿಸಿದ್ದ ಅಪರಾಧಿಗೆ ಇಲ್ಲಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 10 ವರ್ಷ ಕಠಿಣ ಜೈಲು ಶಿಕ್ಷೆ (Jail) ಹಾಗೂ ₹15,000 ದಂಡ ವಿಧಿಸಿದೆ. ದಂಡ (Fine) ಕಟ್ಟಲು ವಿಫಲವಾದಲ್ಲಿ ಎರಡು ವರ್ಷ ಸಾದಾ ಸೆರೆವಾಸ ಶಿಕ್ಷೆ ವಿಧಿಸಲಾಗಿದೆ.
ತೀರ್ಥಹಳ್ಳಿ ತಾಲ್ಲೂಕಿನ ಮೂವಳ್ಳಿ ಗ್ರಾಮದ ಆಲ್ಬರ್ಟ್ (45) ಶಿಕ್ಷೆಗೊಳಗಾದ ವ್ಯಕ್ತಿ. ಈತ ತನ್ನ ಪತ್ನಿ ಸುಧಾ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಲು ಪ್ರಯತ್ನಿಸಿದ್ದ ಬಗ್ಗೆ ಮಾಳೂರು ಪೊಲೀಸ್ ಠಾಣೆಯಲ್ಲಿ 2024ರ ಮೇ 10ರಂದು ಪ್ರಕರಣ ದಾಖಲಾಗಿತ್ತು. ಪಿಎಸ್ಐ ಶಿವಾನಂದ ಧರಣ್ಣನವರ್ ತನಿಖೆ ನಡೆಸಿ ನ್ಯಾಯಾಲಯಕ್ಕೆ (Shivamogga Court) ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ ಮಹಿಳೆಗೆ KFD ಪಾಸಿಟಿವ್, ಸರ್ವೇಕ್ಷಣಾಧಿಕಾರಿ ಏನಂದ್ರು? ಚಿಕಿತ್ಸೆಗೆ ಏನೆಲ್ಲ ವ್ಯವಸ್ಥೆಯಾಗಿದೆ?
ಸರ್ಕಾರಿ ವಕೀಲರಾದ ಮಮತಾ ವಾದ ಮಂಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಅಭಯ್ ಚೌಗಲಾ ತೀರ್ಪು ಪ್ರಕಟಿಸಿದ್ದಾರೆ.
LATEST NEWS
- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

About The Editor
ನಿತಿನ್ ಆರ್.ಕೈದೊಟ್ಲು





