ಶಿವಮೊಗ್ಗ: ದೂರದರ್ಶನ ಚಂದನ ಮತ್ತು ಆಕಾಶವಾಣಿಯ ವಾರ್ತಾ ವಾಚಕಿ ಹಾಗೂ ನಿರೂಪಕಿ ಸುಗುಣಾ ಸತೀಶ್ ಅವರಿಗೆ ‘ಅಪರ್ಣ ನಿರೂಪಣಾ ರತ್ನ’ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಬೆಂಗಳೂರಿನ ಶಿಕ್ಷಕರ ಸದನದಲ್ಲಿ ನಡೆದ ರಾಜ್ಯಮಟ್ಟದ ಶಿಕ್ಷಕರ ಸಮ್ಮೇಳನ 2025 ರಲ್ಲಿ ಸೂರ್ಯ ಫೌಂಡೇಶನ್ ಮತ್ತು ಸ್ಪಾರ್ಕ್ ಅಕಾಡೆಮಿಯ ಸಂಸ್ಥಾಪಕ ಅಧ್ಯಕ್ಷರಾದ ಸೋಮೇಶ್ವರ ನವೋದಯ, ಚಲನಚಿತ್ರ ನಟ ಸಾಯಿಪ್ರಕಾಶ್, ನಿಶ್ಚಿತ ಫೌಂಡೇಶನ್ ನ ಅಧ್ಯಕ್ಷರು ಮತ್ತು ಭಾರತೀಯ ಜನತಾ ಪಕ್ಷದ ಮಹಿಳಾ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ನಿಶ್ಚಿತ, ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಅಧ್ಯಕ್ಷರಾದ ಪಿ. ಮಹೇಶ್ ಹಾಗೂ ಲೇಖಕರು, ಮನೋಪ್ರೇರಣಾ ತರಬೇತುದಾರರು ಮತ್ತು ಉತ್ಪಾದಕತೆ ತಜ್ಞರಾದ ಸಿ.ವಿ. ವೇಣು ಸೇರಿದಂತೆ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

ಇದನ್ನೂ ಓದಿ » ‘ಶಿವಮೊಗ್ಗಕ್ಕೆ ಇನ್ನೂ ₹100 ಕೋಟಿ ಬರಬೇಕಿತ್ತು’, ಸಂಸದ ರಾಘವೇಂದ್ರ ಆಕ್ರೋಶ, ಆಗಿದ್ದೇನು?
ಸುಗುಣಾ ಸತೀಶ್ ಅವರು ನಿರೂಪಣಾ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಮತ್ತು ಅವರ ನಿರೂಪಣಾ ಕೌಶಲ್ಯವನ್ನು ಪರಿಗಣಿಸಿ, ಬೆಂಗಳೂರಿನ ಸ್ಪಾರ್ಕ್ ಅಕಾಡೆಮಿ ಮತ್ತು ಸೂರ್ಯ ಫೌಂಡೇಶನ್ ಸಂಸ್ಥೆ ಪ್ರಶಸ್ತಿ ನೀಡಿ ಗೌರವಿಸಿದೆ.
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





