ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಬೀದಿ ನಾಯಿಗೆ ಬಲೆ ಹಾಕಿ ಹಿಡಿದು ಕ್ರೂರವಾಗಿ ಹೊಡೆದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಸಂಬಂಧ ಪ್ರಾಣಿ ರಕ್ಷಣಾ ಸೇವಾ ತಂಡದ ಸದಸ್ಯ ಸೂರಜ್.ಎಸ್ ತುಂಗಾನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಎಲ್ಲಿ ಆಗಿದ್ದು? ಹೇಗಾಯ್ತು ಘಟನೆ?
ಹಂದಿ ಹಿಡಿಯುವ ಗುಂಪೊಂದು ಬೀದಿ ನಾಯಿಯೊಂದನ್ನು ಬಲೆಯಲ್ಲಿ ಸೆರೆಹಿಡಿದು ದೊಣ್ಣೆಯಿಂದ ಹೊಡೆದು ಸಾಯಿಸಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ನವೆಂಬರ್ 28ರ ಬೆಳಗ್ಗೆ 8.16ಕ್ಕೆ ಶಿವಮೊಗ್ಗದ ಗೋಪಾಳ ಪೊಲೀಸ್ ಲೇಔಟ್ನ ವೃದ್ಧಾಶ್ರಮದ ಎದುರು ನಡೆದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ » ಕೋಣಂದೂರು ಬಳಿ ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ
ನಾಯಿ ಹಿಡಿದು ಕ್ರೂರವಾಗಿ ಹತ್ಯೆ
ಘಟನೆ ನಡೆದ ಸ್ಥಳದ ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಿದಾಗ, ಬೀದಿ ನಾಯಿ ಹಿಡಿದು ಕ್ರೂರವಾಗಿ ಹತ್ಯೆ ಮಾಡಿರುವ ದೃಶ್ಯ ಕಂಡುಬಂದಿದೆ. ಸೂರಜ್ ನೀಡಿದ ದೂರಿನ ಮೇರೆಗೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಾಣಿ ಹಿಂಸೆ ತಡೆ ಕಾಯ್ದೆ-1960ರ ಕಲಂ11 (1) ಮತ್ತು ಭಾರತೀಯ ನ್ಯಾಯ ಸಂಹಿತೆ ಕಲಂ 325ರ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
LATEST NEWS
- ನವುಲೆ ಬಳಿ ನೇಣು ಬಿಗಿದುಕೊಂಡ ಯುವಕನನ್ನು ರಕ್ಷಿಸಿದ ಪೊಲೀಸರು, ಹೇಗಿತ್ತು ಕಾರ್ಯಾಚರಣೆ?

- ಹೊಂಬುಜದಲ್ಲಿ ಬೆಳ್ಳಿ ರಥೋತ್ಸವ, ಜಾತ್ರೆಯಲ್ಲಿ ಏನೇನಲ್ಲ ಪೂಜೆ ನಡೆಯಿತು?

- ಜನವರಿಯಲ್ಲಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ

- ಕಾರ್ಗಲ್ನಲ್ಲಿ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ದಿಢೀರ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

- ಭದ್ರಾವತಿಯ ಒಂದೇ ಕುಟುಂಬದ ಐದು ಜನರಿಗೆ 2 ವರ್ಷ ಜೈಲು ಶಿಕ್ಷೆ, ₹1,90,000 ದಂಡ, ಏನಿದು ಪ್ರಕರಣ?

About The Editor
ನಿತಿನ್ ಆರ್.ಕೈದೊಟ್ಲು





