ಡಾ.ಜಯಶ್ರೀ, ಪುತ್ರ ಆಕಾಶ್‌ ಆತ್ಮಹತ್ಯೆ ಕೇಸ್‌, ಗೊತ್ತಾಗಿದ್ದು ಹೇಗೆ? ‘ಸಾನಿಧ್ಯ’ ಮನೆ ಬಗ್ಗೆ ಜನ ಹೇಳಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಸ್ತ್ರೀರೋಗ ತಜ್ಞೆ (Doctor) ಡಾ. ಜಯಶ್ರೀ (55) ಮತ್ತು ಅವರ ಪುತ್ರ ಆಕಾಶ್‌ (34) ಆತ್ಮಹತ್ಯೆ ಪ್ರಕರಣ ಅ‍ಶ್ವಥನಗರ ಬಡಾವಣೆಯನ್ನು ತಲ್ಲಣಗೊಳಿಸಿದೆ. ನೆಂಟರು, ಇಷ್ಟರು ದಿಗ್ಭ್ರಮೆಗೀಡಾಗಿದ್ದಾರೆ. ಕೋಟ್ಯಂತರ ಮೌಲ್ಯದ ಆಸ್ತಿ ಇದ್ದರು ನೆಮ್ಮದಿ ಕಾಣದೆ ತಾಯಿ, ಮಗ ನೇಣಿಗೆ ಕೊರಳೊಡ್ಡಿದ್ದಾರೆ.

ಒಂದೇ ಹೊತ್ತಲ್ಲಿ ತಾಯಿ, ಮಗ ನೇಣಿಗೆ

ಡಾ. ಜಯಶ್ರೀ ಶಿವಮೊಗ್ಗದ ಖ್ಯಾತ ಸ್ತ್ರೀರೋಗ ತಜ್ಞೆ. ಪ್ರತಿಷ್ಠಿತ ಕುಟುಂಬ, ಕೋಟಿ ಕೋಟಿ ಆಸ್ತಿಯ ಒಡತಿಯಾದರು ಹಮ್ಮು, ಅಹಮ್ಮು ತೋರಿದವರಲ್ಲ. ಗಟ್ಟಿಗಿತ್ತಿಯಾಗಿದ್ದ ಡಾ. ಜಯಶ್ರೀ ತಮ್ಮ ಮನೆಯ ಕೊಠಡಿಯಲ್ಲಿ ನೈಲಾನ್‌ ಹಗ್ಗಕ್ಕೆ ನೇಣು ಬಿಗಿದುಕೊಂಡಿದ್ದಾರೆ. ಮತ್ತೊಂದು ಕೊಠಡಿಯಲ್ಲಿ ಡಾ. ಜಯಶ್ರೀ ಅವರ ಏಕೈಕ ಪುತ್ರ ಆಕಾಶ್‌ ಕೂಡ ಕುಣಿಕೆಗೆ ಕೊರಳೊಡಿದ್ದಾರೆ.

Doctor Jayshree and her son Akash
ಡಾ. ಜಯಶ್ರೀ ಮತ್ತು ಅವರ ಪುತ್ರ ಆಕಾಶ್‌

ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?

ಅಶ್ವಥನಗರ 5ನೇ ಅಡ್ಡರಸ್ತೆಯ ‘ಸಾನಿಧ್ಯʼ ಮನೆಯಲ್ಲಿ ಡಾ. ಜಯಶ್ರೀ, ಪುತ್ರ ಆಕಾಶ್‌ ಮತ್ತು ಸೊಸೆ ಇದ್ದರು. ‘ಮನೆಯಲ್ಲಿ ಮೂವರು ಪ್ರತ್ಯೇಕವಾಗಿದ್ದರು. ಇವತ್ತು ಬೆಳಗ್ಗೆ ಸೊಸೆಗೆ ತಡವಾಗಿ ಎಚ್ಚರವಾಗಿದ್ದು ಪತಿಯ ಕೊಠಡಿಯ ಬಾಗಿಲು ಬಡಿದರು ತೆರೆದಿರಲಿಲ್ಲ. ಅನುಮಾನಗೊಂಡು ಸಂಬಂಧಿಕರಿಗೆ ವಿಷಯ ತಿಳಿಸಿದ್ದರು. ಅವರು ಬಂದು ಕೊಠಡಿಯ ಬಾಗಿಲು ಒಡೆದು ತೆಗೆದಾಗ ಆಕಾಶ್‌ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆʼ ಎಂದು ಹೆಚ್ಚುವರಿ ರಕ್ಷಣಾಧಿಕಾರಿ ಎ.ಜೆ.ಕಾರ್ಯಪ್ಪ ತಿಳಿಸಿದ್ದಾರೆ.

‘ಡಾ. ಜಯಶ್ರೀ ಅವರ ಕೊಠಡಿಯ ಬಾಗಿಲನ್ನು ತೆರೆದಾಗ ಅವರು ನೈಲಾನ್‌ ಹಗ್ಗಕ್ಕೆ ಕೊರಳೊಡ್ಡಿರುವುದು ಗೊತ್ತಾಗಿದೆ. ಕೂಡಲೆ ಪೊಲೀಸರಿಗೆ ಕರೆ ಮಾಡಲಾಗಿದೆʼ ಎಂದು ಎಎಸ್‌ಪಿ ಕಾರ್ಯಪ್ಪ ಸ್ಪಷ್ಟಪಡಿಸಿದರು.

[su_note note_color=”#f1f1f1″ text_color=”#ffffff” radius=”0″]

ಸರಣಿ ಆತ್ಮಹತ್ಯೆಯ ‘ಸಾನಿಧ್ಯʼ

ಅಶ್ವಥನಗರದ ‘ಸಾನಿಧ್ಯ’ ಮನೆಯಲ್ಲಿ ಆತ್ಮಹತ್ಯೆಗಳ ಸರಣಿ ಮುಂದುವರೆದಿದೆ. ಡಾ. ಜಯಶ್ರೀ, ಆಕಾಶ್‌ ಆತ್ಮಹತ್ಯೆಯಿಂದ ಒಟ್ಟು ಐದು ಮಂದಿ ಸಾನ್ನಿಧ್ಯದಲ್ಲಿ ಅಸಹಜವಾಗಿ ಸಾವನ್ನಪ್ಪಿದಂತಾಗಿದೆ ಎಂದು ಸ್ಥಳೀಯರು ಆತಂಕದಿಂದ ಹೇಳುತ್ತಾರೆ.

Newly-Wed-Navyashree-Commits-suicide
ಆಕಾಶ್‌ ಮೊದಲ ಪತ್ನಿ ನವ್ಯಶ್ರೀ

ಡಾ. ಜಯಶ್ರೀ ಅವರದ್ದು ಪ್ರತಿಷ್ಠಿತ ಹೊಮ್ಮರಡಿ ಕುಟುಂಬ. ಮೂಲತಃ ದಾವಣಗೆರೆ ಜಿಲ್ಲೆಯ ನ್ಯಾಮತಿಯವರು. ಶಿವಮೊಗ್ಗದ ಅಶ್ವಥನಗರದಲ್ಲಿ ‘ಸಾನಿಧ್ಯʼ ಮನೆಯನ್ನು ಖರೀದಿಸಿದ್ದರು. ‘ಇದೇ ಮನೆಯಲ್ಲಿ ಡಾ. ಜಯಶ್ರೀ ಪತಿ ಡಾ. ನಾಗರಾಜ್‌ ಆತ್ಮಹತ್ಯೆ ಮಾಡಿಕೊಂಡಿದ್ದರು. ಮೂರು ವರ್ಷದ ಹಿಂದೆ ಇದೇ ಮನೆಯ ಕೆಳಭಾಗದಲ್ಲಿ ಡಾ. ಜಯಶ್ರೀ ಪುತ್ರ ಆಕಾಶ್‌ ಅವರ ಪತ್ನಿ ನವ್ಯಶ್ರೀ ಕೂಡ ನೇಣಿಗೆ ಕೊರಳೊಡ್ಡಿದ್ದರುʼ ಎಂದು ಇವರ ಸಂಬಂಧಿ ಮಂಜು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಈಗ ಇದೇ ಮನೆಯ ಕೆಳಮಹಡಿಯಲ್ಲಿ ಡಾ. ಜಯಶ್ರೀ, ಮೇಲ್ಮಹಡಿಯ ಕೊಠಡಿಯಲ್ಲಿ ಆಕಾಶ್‌ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಇನ್ನು ‘ಈ ಮನೆ ಕಟ್ಟಿದವರು ಇದೇ ಮನೆಯಲ್ಲಿ ಅಸಹಜವಾಗಿ ಸಾವನ್ನಪ್ಪಿದ್ದರುʼ ಎಂದು ಮಾಜಿ ಕಾರ್ಪೊರೇಟರ್‌ ವಿಶ್ವಾಸ್‌ ಸ್ಮರಿಸಿಕೊಂಡಿದ್ದಾರೆ.

[/su_note]

6 ತಿಂಗಳ ಹಿಂದಷ್ಟೆ ಮರು ಮದುವೆಯಾಗಿತ್ತು

ಡಾ. ಜಯಶ್ರೀ ಪುತ್ರ ಅಕಾಶ್‌ಗೆ 2022ರಲ್ಲಿ ಚಿಕ್ಕಮಗಳೂರು ಜಿಲ್ಲೆಯ ನವ್ಯಶ್ರೀ ಎಂಬುವವರ ಜೊತೆಗೆ ವಿವಾಹವಾಗಿತ್ತು. ಐದೇ ತಿಂಗಳಿಗೆ, ಅಂದರೆ, 2022ರ ನವೆಂಬರ್‌ 6ರಂದು ನವ್ಯಶ್ರೀ ಇದೇ ಸಾನಿಧ್ಯ ಮನೆಯ ಶೆಡ್‌ನಲ್ಲಿ ನೇಣಿಗೆ ಶರಣಾಗಿದ್ದರು. ಈಚೆಗೆ ಚಿತ್ರದುರ್ಗ ಮೂಲದ ಯುವತಿ ಜೊತೆಗೆ ಆಕಾಶ್‌ ಎರಡನೆ ವಿವಾಹವಾಗಿದ್ದರು. ದುರದೃಷ್ಟವಶಾತ್‌ ಐದೇ ತಿಂಗಳಲ್ಲಿ ಆಕಾಶ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Hommaradi-Doctor-Jayashree-and-son-no-more

ʼಕೋಟಿ ಇದ್ದರು ನೆಮ್ಮದಿ ಇರಲಿಲ್ಲʼ

ಡಾ. ಜಯಶ್ರೀ ಅವರ ಕುಟುಂಬ ಕೋಟ್ಯಂತರ ರುಪಾಯಿ ಆಸ್ತಿ ಹೊಂದಿತ್ತು. ಉಷಾ ನರ್ಸಿಂಗ್ ಹೋಂ ಬಳಿ ಹೊಮ್ಮರಡಿ ಹೆಸರಿನ ನರ್ಸಿಂಗ್‌ ಹೋಂ ಇತ್ತು. ಶಿವಮೊಗ್ಗ, ನ್ಯಾಮತಿ ಸೇರಿದಂತೆ ವಿವಿಧೆಡೆ ನಿವೇಶನ, ತೋಟಗಳಿದ್ದವು. ಇಷ್ಟಿದ್ದರು ನೆಮ್ಮದಿ ಇರಲಿಲ್ಲ ಅನ್ನುವುದು ಅವರ ಪರಿಚಿತರ ಮಾತು.

ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್‌ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು? 

‘ಆಕಾಶ್‌ ಅವರ ಮೊದಲ ಪತ್ನಿ ನವ್ಯಶ್ರೀ ಆತ್ಮಹತ್ಯೆಯ ಬಳಿಕ ಡಾ. ಜಯಶ್ರೀ ಮತ್ತು ಆಕಾಶ್‌ ಖಿನ್ನತೆಗೆ ಒಳಗಾಗಿದ್ದರು. ಅಲ್ಲದೆ ತಾಯಿ, ಮಗನ ಮಧ್ಯೆ ಸಣ್ಣಪುಟ್ಟ ಜಗಳವಾಗುತ್ತಿತ್ತು ಎಂದು ಗೊತ್ತಾಗಿತ್ತುʼ, ಅನ್ನುತ್ತಾರೆ ಅವರ ಕುಟುಂಬಕ್ಕೆ ಆಪ್ತರಾದ ರೋಟರಿ ವಿಜಯ್‌ ಕುಮಾರ್‌. ‘ರಿಯಲ್‌ ಎಸ್ಟೇಟ್‌ ವ್ಯವಹಾರ ಸಂಬಂಧ ತಾಯಿ ಮತ್ತು ಮಗನ ಮಧ್ಯೆ ಮನಸ್ತಾಪವಾಗಿತ್ತು ಎಂದು ಹೇಳುತ್ತಿದ್ದಾರೆ ಎಂದು ಮಾಜಿ ಕಾರ್ಪೊರೇಟರ್‌ ವಿಶ್ವಾಸ್‌ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಡಾ. ಜಯಶ್ರೀ ಮತ್ತು ಆಕಾಶ್‌ ಆತ್ಮಹತ್ಯೆ ಪ್ರಕರಣ ಸದ್ಯ ಶಿವಮೊಗ್ಗದಲ್ಲಿ ಚರ್ಚೆಗೆ ಕಾರಣವಾಗಿದೆ. ತನಿಖೆಯಿಂದಷ್ಟೆ ಇವರ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ. ವಿನೋಬನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 5, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment