ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿರಾಳಕೊಪ್ಪ: ಪಟ್ಟಣ ಸಮೀಪದ ತಾಳಗುಂದದ ವೀರಭದ್ರೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಚಿರತೆಯೊಂದು (Male leopard) ಮೃತಪಟ್ಟಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಕೊರಳಿಗೆ ಸಿಕ್ಕಿ ಹಾಕಿಕೊಂಡಿದ್ದ ಉರುಳಿನಿಂದ (snare trap) ತಪ್ಪಿಸಿಕೊಳ್ಳಲು ಸಾಧ್ಯವಾಗದೆ ಚಿರತೆ ಮೃತಪಟ್ಟಿದೆ.
ಕಳೆದ ಎರಡು ಮೂರು ದಿನಗಳ ಹಿಂದೆಯೆ ಚಿರತೆ ಸಾವನ್ನಪ್ಪಿರುವ ಸಾಧ್ಯತೆಯಿದೆ. ತೀವ್ರವಾಗಿ ದುರ್ವಾಸನೆ ಹರಡಿದ ಹಿನ್ನೆಲೆ ಸ್ಥಳೀಯರು ವಿಷಯವನ್ನು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ » ಮರಕ್ಕೆ ಬೈಕ್ ಡಿಕ್ಕಿ, ಬೈಕ್ನ ಹಿಂಬದಿ ಸವಾರ ಸಾವು
ಇದು ಸುಮಾರು ನಾಲ್ಕರಿಂದ ಐದು ವರ್ಷ ವಯಸ್ಸಿನ ಗಂಡು ಚಿರತೆಯಾಗಿದ್ದು, ಘಟನೆ ಸಂಬಂಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗಿದೆ ಎಂದು ವಲಯ ಅರಣ್ಯ ಅಧಿಕಾರಿ ಜಾವೀದ್ ತಿಳಿಸಿದ್ದಾರೆ.
LATEST NEWS
- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು





