ಶಿವಮೊಗ್ಗದಲ್ಲಿ ಸಿದ್ದರಾಮಯ್ಯ ವಿರುದ್ಧ ಮಹಿಳೆಯರು ಆಕ್ರೋಶ, ತಕ್ಷಣ ಕ್ಷಮೆಗೆ ಒತ್ತಾಯ, ಕಾರಣವೇನು?

ಶಿವಮೊಗ್ಗ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಏಕವಚನ ಮತ್ತು ಅವಹೇಳನಕಾರಿ ಮಾತನಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಮಹಿಳಾ ಮೋರ್ಚಾದ ಕಾರ್ಯಕರ್ತೆಯರು, ಸಿದ್ದರಾಮಯ್ಯ ಅವರು ಮಹಿಳಾ ವಿರೋಧಿ ಹೇಳಿಕೆ ನೀಡಿದ್ದಾರೆ. ತಕ್ಷಣ ಅವರು ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್‌ ಅವರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಯಾರೆಲ್ಲ ಏನೆಲ್ಲ ಹೇಳಿದರು?

ಮಹಿಳಾ ಮೋರ್ಚಾ ನಗರ ಅಧ್ಯಕ್ಷೆ ರಶ್ಮಿ ಶ್ರೀನಿವಾಸ್ ಮಾತನಾಡಿ, ‘ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ವಿರುದ್ಧ ಸಿದ್ದರಾಮಯ್ಯ ಅವಹೇಳನ ಮಾಡಿದ್ದಾರೆ. ಏಕವಚನದಲ್ಲಿ ಮಾತನಾಡಿದ್ದಾರೆ‌. ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಅವರ ವಿರುದ್ಧ ಇದೇ ರೀತಿ ಮಾತನಾಡುತ್ತಾರಾ. ಹಿಂದೆ ರಾಷ್ಟ್ರಪತಿ ವಿರುದ್ಧವು ಸಿದ್ದರಾಮಯ್ಯ ಅವರು ಇದೇ ರೀತಿ ಏಕವಚನ ಪ್ರಯೋಗ ಮಾಡಿದ್ದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಮಹಿಳೆಯರಿಗೆ ರಕ್ಷಣೆ ಇಲ್ಲದಾಗಿದೆʼ‌ ಎಂದು ಆಕ್ರೋಶ ವ್ಯಕ್ತಪಡಿಸಿದರು.

BJP-Mahila-Morcha-protest-against-CM-Siddaramaiah

ಇದನ್ನೂ ಓದಿ » ರಾಜ್ಯ ಕ್ರಿಕೆಟ್‌ ಸಂಸ್ಥೆ ಚುನಾವಣೆ, ಡಿ.ಎಸ್‌.ಅರುಣ್‌ಗೆ ಭರ್ಜರಿ ಗೆಲುವು

ಮಾಜಿ ಉಪ ಮೇಯರ್‌ ಸುರೇಖಾ ಮುರಳೀಧರ್ ಮಾತನಾಡಿ, ‘ಅನುಭವ ರಾಜಕಾರಣಿ ಆಗಿರುವ ಸಿದ್ದರಾಮಯ್ಯ ಅವರು ಈ ರೀತಿಯ ಹೇಳಿಕೆ ನೀಡಿ ಅವರ ಮರ್ಯಾದೆಯನ್ನು ಜಗಜ್ಜಾಹೀರು ಮಾಡಿಕೊಂಡಿದ್ದಾರೆ. ಮುಖ್ಯಮಂತ್ರಿ ಕುರ್ಚಿ ಕಚ್ಚಾಟದಲ್ಲಿ ಸಿದ್ಧರಾಮಯ್ಯ ಸ್ಥಿಮಿತ ಕಳೆದುಕೊಂಡಿದ್ದಾರೆ‌. ವಿನಾಶಕಾಲ ವಿಪರೀತ ಬುದ್ದಿ ಎಂಬಂತಾಗಿದೆʼ‌ ಎಂದು ಆರೋಪಿಸಿದರು.

BJP-Mahila-Morcha-protest-against-CM-Siddaramaiah

ಇದನ್ನೂ ಓದಿ » ಶಿವಮೊಗ್ಗದಲ್ಲಿ ಇಂದಿನಿಂದ ಕ್ರಿಕೆಟ್‌ ಪಂದ್ಯಾವಳಿ, ರಾಷ್ಟ್ರೀಯ ತಂಡದ ಆಯ್ಕೆಗಾರರು ಆಗಮನ, ಎಲ್ಲಿ?

ಅಭಿವೃದ್ಧಿ ಶೂನ್ಯವಾಗಿರುವ ಸರ್ಕಾರ‌. ಕಾಂಗ್ರೆಸ್ ಸರ್ಕಾರದ ಪಾಪದ ಕೊಡ ತುಂಬಿದೆ. ಸಿದ್ದರಾಮಯ್ಯ ಅವರು ತಕ್ಷಣ ಕ್ಷಮಾಪಣೆ ಕೇಳುವುದು ಉತ್ತಮಸುಮಾ ಭೂಪಾಳಂ

BJP-Mahila-Morcha-protest-against-CM-Siddaramaiah

ಶಾಸಕರಿಗೆ ಅನುದಾನ ನೀಡಿಲ್ಲ. ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಮಹಿಳೆಯರಿಗೆ ಪೂಜನೀಯ ಸ್ಥಾನ ನೀಡುತ್ತೇವೆ ಎಂದು ಭಾಷಣ ಮಾಡುವ ಕಾಂಗ್ರೆಸ್ ಮುಖಂಡರು ಈಗ ಏಕವಚನದ ನಿಂದನೆಗೆ ಏನಂತಾರೆ?ಶಾಂತಾ ಸುರೇಂದ್ರ

ಮಹಿಳಾ ಮೋರ್ಚಾ ನಗರ ಪ್ರಧಾನ ಕಾರ್ಯದರ್ಶಿ ಯಶೋದ ವೈಷ್ಣವ್‌, ನಿರ್ಮಲಾ, ನಾಗರಾಜ್‌, ಚಂದ್ರಶೇಖರ್‌.ಎಸ್‌, ಮಾಲ್ತೇಶ್‌ ಸೇರಿ ಹಲವರು ಇದ್ದರು.

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : December 8, 2025 at 1:31 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಡಿಸೆಂಬರ್ 8, 2025

Leave a Comment