ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರ ಕಾರಾಗೃಹದ ಕೈದಿಯೊಬ್ಬ (Convict) ಇಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ. ಮೃತರನ್ನು ಹೊಸನಗರ ತಾಲ್ಲೂಕಿನ ಗರ್ತಿಕೆರೆ, ಅಮೃತ ಗ್ರಾಮದ ಕೃಷ್ಣ (44) ಎಂದು ಗುರುತಿಸಲಾಗಿದೆ.
ಮೃತ ಕೃಷ್ಣ ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದ. ಹಲವು ಬಾರಿ ಮೆಗ್ಗಾನ್ ಆಸ್ಪತ್ರೆಗೆ ತೆರಳಿ ಚಿಕಿತ್ಸೆಯನ್ನು ಪಡೆದಿದ್ದ. ಪ್ರಕರಣವೊಂದರಲ್ಲಿ ಆರೋಪ ಸಾಬೀತಾದ ಹಿನ್ನಲೆ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿತ್ತು ಎಂದು ಜೈಲು ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ » ಮಂಡಗದ್ದೆ ಬಳಿ ಅರಣ್ಯ ಇಲಾಖೆ ದಿಢೀರ್ ಕಾರ್ಯಾಚರಣೆ, ಇಬ್ಬರು ಆರೋಪಿಗಳು ಅರೆಸ್ಟ್
ಡಿಸೆಂಬರ್ 5ರಂದು ಸಂಜೆ ಕೃಷ್ಣನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೃಷ್ಣ ಇಂದು ಬೆಳಗಿನ ಜಾವ 2 ಗಂಟೆಗೆ ಮೃತಪಟ್ಟಿದ್ದಾನೆ ಎಂದು ಆಸ್ಪತ್ರೆಯ ವೈದ್ಯರು ದೃಢಪಡಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು















