ಮರದಿಂದ ಬಿದ್ದು ಕಾಳಿಂಗ ಸರ್ಪ ಸಾವು, ಎಲ್ಲಿ? ಹೇಗಾಯ್ತು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹೊಸನಗರ: ಮರದಿಂದ ಬಿದ್ದು ಕಾಳಿಂಗ ಸರ್ಪವೊಂದು (King Cobra) ಮೃತಪಟ್ಟ ಘಟನೆ ಹೊಸನಗರ ತಾಲೂಕು ಮೂಡುಗೊಪ್ಪ ನಗರದ ಪಂಚಮುಖಿ ಆಂಜನೇಯ ದೇವಸ್ಥಾನ ಸಮೀಪ ನಡೆದಿದೆ.

ಇದನ್ನೂ ಓದಿ » ಕ್ಯಾಂಟರ್‌ ಲಾರಿ ಪಲ್ಟಿ, ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಳಿಗಳನ್ನು ಹೊತ್ತೊಯ್ದ ಜನ

ಇಲ್ಲಿನ ಗುರುರಾಜ್ ಎಂಬುವವರ ಜಮೀನಿನ ಸಮೀಪ ಸುಮಾರು 12 ಅಡಿ ಉದ್ದದ ಸರ್ಪ ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿತ್ತು. ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದರು. ಪಶು ವೈದ್ಯಾಧಿಕಾರಿಗಳು ಮರಣೋತ್ತರ ಪರೀಕ್ಷೆ ನಡೆಸಿದರು.

ಕಾಳಿಂಗ ಸರ್ಪ ಎತ್ತರದ ಮರದಿಂದ ಬಿದ್ದು ಮೃತಪಟ್ಟಿರುವುದಾಗಿ ವರದಿ ಸಲ್ಲಿಸಿದ್ದಾರೆ. ಬಳಿಕ ಮೃತ ಕಾಳಿಂಗ ಸರ್ಪದ ಅಂತ್ಯಸಂಸ್ಕಾರ ನಿಯಮಾನುಸಾರ ನಗರ ಆರ್‌ಎಫ್‌ಒ ಸಂತೋಷ ಮಲ್ಲನ ಗೌಡ ಸಮ್ಮುಖದಲ್ಲಿ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದಿಂದ ನಡೆಯಿತು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment