ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ: ಪ್ರೇಮಿಗಳ ಪರ ಮಾತನಾಡಿದ್ದಕ್ಕೆ ಮಾರಕಾಸ್ತ್ರದಿಂದ ಇರಿದು ಇಬ್ಬರ ಹತ್ಯೆ (Two killed ) ಮಾಡಲಾಗಿದೆ. ಭದ್ರಾವತಿಯ ಹಳೆ ನಗರದಲ್ಲಿ ಘಟನೆ ಸಂಭವಿಸಿದೆ.
ಭದ್ರಾವತಿ ಹಳೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಜೈ ಭೀಮ್ ನಗರದಲ್ಲಿ ಇಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಮೃತರನ್ನು ಕಿರಣ್ (25) ಮತ್ತು ಮಂಜುನಾಥ್ (65) ಎಂದು ಗುರುತಿಸಲಾಗಿದೆ.

ಪ್ರೇಮಿಗಳ ಪರ ನಿಂತಿದ್ದಕ್ಕೆ ಕೃತ್ಯ
ಘಟನೆ ಸಂಬಂಧ ಮಾಧ್ಯಮಗಳಿಗೆ ವಾಟ್ಸಪ್ ಮೂಲಕ ಮಾಹಿತಿ ನೀಡಿರುವ ಜಿಲ್ಲಾ ರಕ್ಷಣಾಧಿಕಾರ ಜಿ.ಕೆ.ಮಿಥುನ್ ಕುಮಾರ್, ‘ಎರಡು ದಿನದ ಹಿಂದೆ ನಂದೀಶ್ ಮತ್ತು ಸೃಷ್ಟಿ ಎಂಬವವರು ನಾಪತ್ತೆಯಾಗಿದ್ದರು. ಇಂದು ಸಂಜೆ ಅವರು ಪೊಲೀಸ್ ಠಾಣೆಗೆ ವಾಪಸ್ ಬಂದಿದ್ದರು. ಸೃಷ್ಟಿ ತಾನು ನಂದೀಶ್ನೊಂದಿಗೇ ಇರುವುದಾಗಿ ಹೇಳಿದ್ದರು. ಇದರಿಂದ ಕೋಪಗೊಂಡ ಸೃಷ್ಟಿಯ ಸಹೋದರ ಮತ್ತು ಅವನ ಸ್ನೇಹಿತರು ಈ ಕೃತ್ಯ ಎಸಗಿದ್ದಾರೆʼ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಪೊಲೀಸರ ದಾಳಿ, ಸಾಗರದ ವ್ಯಕ್ತಿ ಅರೆಸ್ಟ್, ಕಾರಣವೇನು?
‘ಪ್ರೇಮಿಗಳಿಗೆ ಬೆಂಬಲವಾಗಿದ್ದಾರೆ ಎಂದು ಭಾವಿಸಿ ಕಿರಣ್ ಮೇಲೆ ಹಲ್ಲೆ ನಡೆಸಲಾಗಿದೆ. ಇನ್ನು , ಗುಂಪುಗಳ ನಡುವಿನ ಜಗಳ ಬಿಡಿಸಿದ ಮಂಜುನಾಥ್ ಎಂಬುವವರ ಮೇಲೂ ದಾಳಿ ಮಾಡಲಾಗಿದೆ. ಇಬ್ಬರು ಸಾವನ್ನಪ್ಪಿದ್ದಾರೆ’ ಎಂದು ಜಿಲ್ಲಾ ರಕ್ಷಣಾಧಿಕಾರಿ ತಿಳಿಸಿದ್ದಾರೆ.
LATEST NEWS
- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

About The Editor
ನಿತಿನ್ ಆರ್.ಕೈದೊಟ್ಲು






