ಗಾಂಜಾ ಪತ್ತೆಗೆ ಮತ್ತೆ ಡ್ರೋಣ್ ಹಾರಿಬಿಟ್ಟ ಅಬಕಾರಿ ಇಲಾಖೆ, ಎಲ್ಲೆಲ್ಲಿ ಕಾರ್ಯಾಚರಣೆ ನಡೆಸಲಾಯ್ತು ಗೊತ್ತಾ?

ಶಿವಮೊಗ್ಗ ಲೈವ್.ಕಾಂ | ಸೊರಬ | 27 ಸೆಪ್ಟೆಂಬರ್ 2019

ಜೋಳ ಮತ್ತು ಶುಂಠಿ ಬೆಳೆ ನಡುವೆ ಗಾಂಜಾ ಬೆಳೆ ಬೆಳೆದಿರುವುದನ್ನು ಪತ್ತೆ ಹಚ್ಚಲು ಅಬಕಾರಿ ಇಲಾಖೆ ಪುನಃ ಡ್ರೋಣ್ ಕಾರ್ಯಾಚರಣೆ ಆರಂಭಿಸಿದೆ. ಸೊರಬ ತಾಲೂಕಿನ ವಿವಿಧೆಡೆ ಮೊದಲ ಹಂತದ ಡ್ರೋಣ್ ಆಪರೇಷನ್ ನಡೆಸಲಾಗಿದೆ.

Prashanth GPS copy

ಸಾಗದ್ದೆ, ಕೊಡಕಣಿ, ಮಾಳೆಕೊಪ್ಪ, ಸಾರೆಕೊಪ್ಪ ಗ್ರಾಮಗಳಲ್ಲಿ ಜೋಳ ಮತ್ತು ಶುಂಠಿ ಬೆಳೆ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ಡ್ರೋಣ್ ಹಾರಿಸಿಬಿಟ್ಟರು. ಆದರೆ ಗಾಂಜಾ ಪತ್ತೆ ಆಗಿಲ್ಲ. ಈ ನಡುವೆ ಡ್ರೋಣ್ ಕಾರ್ಯಾಚರಣೆ ನಡೆಸಿದ ಗ್ರಾಮಗಳಲ್ಲಿನ ಸಾರ್ವಜನಿಕರಲ್ಲಿ ಅಬಕಾರಿ ಇಲಾಖೆ ಜಾಗೃತಿ ಮೂಡಿಸಿತು.

ಅಬಕಾರಿ ಉಪ ಆಯುಕ್ತರ ಮಾರ್ಗದರ್ಶನದಲ್ಲಿ ಉಪ ಅಧೀಕ್ಷಕಿ ಲೀಲಾವತಿ ಅವರ ನೇತೃತ್ವದಲ್ಲಿ ಡ್ರೋಣ್ ಕಾರ್ಯಾಚರಣೆ ನಡೆಸಲಾಯಿತು. ಕಳೆದ ವರ್ಷ ಗಾಂಜಾ ಬೆಳೆ ಪತ್ತೆಗೆ ಅಬಕಾರಿ ಇಲಾಖೆ ವತಿಯಿಂದ ಜಿಲ್ಲೆಯಾದ್ಯಂತ ಡ್ರೋಣ್ ಕಾರ್ಯಾಚರಣೆ ನಡೆಸಲಾಗಿತ್ತು. ಇದರಿಂದ ಗಾಂಜಾ ಬೆಳೆ ಪ್ರಮಾಣ ತಗ್ಗಿತ್ತು.

ಅಬಕಾರಿ ನಿರೀಕ್ಷಕಿ ಸುಷ್ಮಾ, ಉಪ ನಿರೀಕ್ಷಕರಾದ ಸುಧಾ, ಅಣ್ಣಪ್ಪ, ಸಿಬ್ಬಂದಿಗಳಾದ ಗಂಗಾಧರ್, ವೀರಭದ್ರಪ್ಪ, ಪುಟ್ಟಪ್ಪ, ಜೀವನ್, ಸಚಿನ್, ಡ್ರೋಣ್ ಕ್ಯಾಮರಾ ನಿರ್ವಾಹಕ ಅಭಿ, ರವೀಂದ್ರನಾಥ್ ಸೇರಿದಂತೆ ಹಲವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : September 27, 2019 at 8:31 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಸೆಪ್ಟೆಂಬರ್ 27, 2019

Leave a Comment