ಶಿವಮೊಗ್ಗ LIVE
ಸಾಗರ: ನಗರ ವ್ಯಾಪ್ತಿಯ ಖಾಸಗಿ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣ ಇನ್ನಿತರೆ ಕಡೆಗಳಲ್ಲಿ ಬೀದಿನಾಯಿಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಲು ನಗರಸಭೆ ಸೂಚಿಸಿದೆ (strict notice).
ಸುಪ್ರೀಂಕೋರ್ಟ್ ನಿರ್ದೇಶನದಂತೆ ಈ ಸಂಸ್ಥೆಗಳ ಆವರಣದಲ್ಲಿ ಯಾವುದೇ ಬೀದಿನಾಯಿಗಳು ವಾಸವಿದ್ದಲ್ಲಿ ಅವುಗಳನ್ನು ಪರಿಶೀಲಿಸಿ ಕೂಡಲೇ ಅವುಗಳ ಸಂಖ್ಯೆಯನ್ನು ಲೆಕ್ಕಹಾಕಿ ನಗರಸಭೆಗೆ ತಿಳಿಸಬೇಕು ಎಂದು ತಿಳಿಸಿದೆ.

ಸಂಸ್ಥೆ ಆವರಣದಲ್ಲಿ ಬೀದಿನಾಯಿ ಉಪಟಳ ತಡೆಯಲು ಹಾಗೂ ಬೀದಿನಾಯಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಸಂಸ್ಥೆ ವ್ಯಾಪ್ತಿಯಲ್ಲಿ ನಾಯಿ ವಾಸ ಮಾಡಲು ಅವಕಾಶ ಮಾಡಿಕೊಟ್ಟರೆ ಅದನ್ನು ಸ್ಥಳಾಂತರಿಸುವ ವೆಚ್ಚವನ್ನು ಸಂಸ್ಥೆಯಿಂದ ವಸೂಲಿ ಮಾಡಲಾಗುವುದು. ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದಲ್ಲಿ ಸಂಸ್ಥೆ ವಿರುದ್ದ ಕಾನೂನುಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.
ಇದನ್ನೂ ಓದಿ » ಸಾಗರ ಬಂದ್, ದಿನಾಂಕ ಪ್ರಕಟಿಸಿದ ಹೋರಾಟ ಸಮಿತಿ, ಬಂದ್ಗೆ ಕಾರಣವೇನು?
ಅಲ್ಲದೇ, ಬೀದಿನಾಯಿಗಳನ್ನು ದತ್ತು ಪಡೆದು ನಗರಸಭೆ ಸೂಚಿಸಿದ ಸ್ಥಳದಲ್ಲಿ ಆಶ್ರಯ ತಾಣ ನಿರ್ಮಿಸಿ ನಿರ್ವಹಣೆ ಮಾಡಲು ಆಸಕ್ತಿಯಿರುವ ಪ್ರಾಣಿಪ್ರಿಯರು ಲಿಖಿತವಾಗಿ ಕಚೇರಿಗೆ ಅರ್ಜಿ ಸಲ್ಲಿಸಬಹದು ಎಂದು ಪೌರಾಯುಕ್ತ ಎಚ್.ಕೆ.ನಾಗಪ್ಪ ತಿಳಿಸಿದ್ದಾರೆ.
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





