ಯಡೇಹಳ್ಳಿ ಕ್ರಾಸ್‌ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ರಿಪ್ಪನ್‌ಪೇಟೆ: ಯಡೇಹಳ್ಳಿ ಕ್ರಾಸ್ ಬಳಿ ಜಿಂಕೆ ಚರ್ಮ (deer skin) ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಅರಣ್ಯ ಸಂಚಾರಿ ದಳದ ಪಿಎಸ್‌ಐ ವಿನಾಯಕ ಕೆ. ಮತ್ತು ಸಿಬ್ಬಂದಿ ಶನಿವಾರ ಬಂಧಿಸಿದ್ದಾರೆ.

ಕಾರವಾರ ಜಿಲ್ಲೆಯ ನವಲಗುಂದ ಗ್ರಾಮದ ಅರ್ಜುನ (26) ಬಂಧಿತ. ಜಿಂಕೆ ಚರ್ಮ ಮಾರಾಟ ಮಾಡಲು ಯತ್ನಿಸುತ್ತಿರುವ ಸಂದರ್ಭ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಸಾಗರದ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು. ನ್ಯಾಯಾಂಗ ಬಂಧನ ವಿಧಿಸಲಾಗಿದೆ.

One-arrested-with-deer-skin.

ಇದನ್ನೂ ಓದಿ » ಜೋಡಿ ಕೊಲೆ ಪ್ರಕರಣ, ಘಟನೆಗೆ ಕಾರಣವೇನು? ಇಲ್ಲಿದೆ ಎಸ್‌ಪಿ ಫಸ್ಟ್‌ ರಿಯಾಕ್ಷನ್

ಅರಣ್ಯ ಸಂಚಾರಿ ದಳದ ಸಿಬ್ಬಂದಿ ಆರ್.ವಿಶ್ವನಾಥ, ಮಹೇಶ, ಚಂದ್ರಕಾಂತ್, ಆಂಜನೇಯ ಪಾಟೀಲ್, ಪ್ರಮೋದ ಕುಮಾರಿ ಮತ್ತು ಹಾಲೇಶ್‌ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment