ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ರೈಲ್ವೆ ಸುದ್ದಿ: ವಿವಿಧ ಕಾಮಗಾರಿಗಳ ಹಿನ್ನೆಲೆ ತಾಳಗುಪ್ಪ – ಬೆಂಗಳೂರು ಸೂಪರ್ ಫಾಸ್ಟ್ ರೈಲನ್ನು ಅರಸೀಕರೆವರೆಗೆ ನಿಯಂತ್ರಿಸಲಾಗುತ್ತಿದೆ. ಇನ್ನು ಯಶವಂತಪುರ – ಶಿವಮೊಗ್ಗ ಎಕ್ಸ್ಪ್ರೆಸ್ ರೈಲು (Trains) ಬದಲಿ ಮಾರ್ಗಗದಲ್ಲಿ ಸಂಚರಿಸಲಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರತಿದಿನ ಬೆಳಗ್ಗೆ 5.20ಕ್ಕೆ ಹೊರಡುವ ತಾಳಗುಪ್ಪ – ಬೆಂಗಳೂರು ಸೂಪರ್ ಫಾಸ್ಟ್ ರೈಲು (ರೈಲು ಸಂಖ್ಯೆ 20652) ನಾಲ್ಕು ದಿನ ಮಾರ್ಗ ಮಧ್ಯೆ ನಿಯಂತ್ರಿಸಲಾಗುತ್ತಿದೆ. ಈ ರೈಲು ಡಿಸೆಂಬರ್ 17, 20, 21 ಮತ್ತು 24ರಂದು ಈ ರೈಲು ಬೆಂಗಳೂರಿನ ಬದಲು ಅರಸೀಕೆರೆವರೆಗೆ ಮಾತ್ರ ಸಂಚರಿಸಲಿದೆ.
ನಾಲ್ಕು ದಿನ ಮಾರ್ಗ ಬದಲಾವಣೆ
ಪ್ರತಿದಿನ ಬೆಳಗ್ಗೆ 9.15ಕ್ಕೆ ಹೊರಡುವ ಯಶವಂತಪುರ – ಶಿವಮೊಗ್ಗ ಎಕ್ಸ್ಪ್ರೆಸ್ ರೈಲು ನಾಲ್ಕು ದಿನ ಬದಲಿ ಮಾರ್ಗದಲ್ಲಿ ಸಂಚರಿಸಲಿದೆ. ಡಿಸೆಂಬರ್ 17, 20, 21 ಮತ್ತು 24 ರಂದು ಪ್ರಯಾಣ ಆರಂಭಿಸುವ ರೈಲು ಸಂಖ್ಯೆ 16579 ಯಶವಂತಪುರ–ಶಿವಮೊಗ್ಗ ಟೌನ್ ಎಕ್ಸ್ ಪ್ರೆಸ್ ಚಿಕ್ಕಬಾಣಾವರ, ನೆಲಮಂಗಲ, ಹಾಸನ ಮತ್ತು ಅರಸೀಕೆರೆ ಮಾರ್ಗವಾಗಿ ಸಂಚರಿಸಲಿದೆ. ಇದು ತುಮಕೂರು ಮತ್ತು ತಿಪಟೂರು ನಿಲುಗಡೆಗಳನ್ನು ಇರುವುದಿಲ್ಲ.

ರೈಲುಗಳ ಸಂಚಾರ ವ್ಯತ್ಯಯಕ್ಕೆ ಕಾರಣವೇನು?
ತುಮಕೂರು ಮತ್ತು ಮಲ್ಲಸಂದ್ರ ನಿಲ್ದಾಣಗಳ ನಡುವೆ ವಿವಿಧ ಇಂಜಿನಿಯರಿಂಗ್ ಕಾಮಗಾರಿ ನಡೆಸಲಾಗುತ್ತಿದೆ. ಭೀಮಸಂದ್ರ ಲಿಮಿಟೆಡ್ ಹೈಟ್ ಸಬ್ವೇನಲ್ಲಿ ಗಾರ್ಡರ್ ಬದಲಾವಣೆ, ಭೀಮಸಂದ್ರ ಮತ್ತು ಮುದ್ದಲಿಂಗನಹಳ್ಳಿ ಹಾಲ್ಟ್ ನಿಲ್ದಾಣಗಳಲ್ಲಿ ಪಾದಚಾರಿ ಮೇಲ್ಸೇತುವೆ ನಿರ್ಮಾಣ, ಹಾಗೂ ನಿಡವಂದ ಮತ್ತು ಹಿರೇಹಳ್ಳಿ ನಡುವಿನ ಲೆವೆಲ್ ಕ್ರಾಸಿಂಗ್–28 ರಲ್ಲಿನ ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ಆದ್ದರಿಂದ ವಿವಿಧ ರೈಲುಗಳ ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
LATEST NEWS
- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

- ಸಚಿವ ಮಧು ಬಂಗಾರಪ್ಪ ಜನ್ಮದಿನ, ವಿದ್ಯಾರ್ಥಿಗಳು, ಪೌರ ಕಾರ್ಮಿಕರಿಗೆ ವಿಮಾನಯಾನ

About The Editor
ನಿತಿನ್ ಆರ್.ಕೈದೊಟ್ಲು





