ಶಿವಮೊಗ್ಗ LIVE
ಶಿಕಾರಿಪುರ: ಹಿರೇಜಂಬೂರು ಗ್ರಾಮದ ಪ್ರಭಣ್ಣ ಕೊಂಡೇರ ಅವರ ಜಮೀನಿನಲ್ಲಿ ಉಳುಮೆ ಮಾಡುವಾಗ 12ನೇ ಶತಮಾನದ ವೀರಗಲ್ಲು (Hero Stone) ಪತ್ತೆಯಾಗಿದೆ. 150 ಸೆಂಟಿ ಮೀಟರ್. ಎತ್ತರ, 9 ಸೆಂ.ಮೀ. ಅಗಲವಿದೆ. ಮೂರು ಹಂತದ ಕೆತ್ತನೆ ಒಳಗೊಂಡಿದೆ.
ಇತಿಹಾಸ ಸಂಶೋಧಕ ರಮೇಶ ಬಿ. ಹಿರೇಜಂಬೂರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಗೋವುಗಳು ಮತ್ತು ಸ್ತ್ರೀಯರನ್ನು ರಕ್ಷಿಸಿ ವೀರಮರಣ ಹೊಂದಿದವನಿಗೆ ವೀರಗಲ್ಲು ಮೇಲಿನ ಪಟ್ಟಿಕೆಯಲ್ಲಿ ಆರು ಸಾಲಿನ ಶಾಸನ ಪಾಠವಿರುವುದು ಕಂಡು ಬಂದಿದೆ.
ಕಳಚೂರಿಯ ಚಕ್ರವರ್ತಿ ಬಿಜ್ಜಳ ದೇವನ ಆಡಳಿತ ಅವಧಿಯಲ್ಲಿ ಉದ್ದರೆಯ ಊರಿನವರು ಅಗ್ರಹಾರ ಜಂಬೂರಿನ ಮೇಲೆ ದಾಳಿ ಮಾಡಿ ಜಂಬೂರಿನ ತುರು ಮತ್ತು ಹೆಂಗಸರನ್ನು ಅಪಹರಿಸಲು ಮುಂದಾಗುತ್ತಾರೆ. ಆಗ ಜಂಬೂರಿನ ಸಾಸಿರ್ವರು, ಕುಂಬಾರ ಬಮ್ಮನ ಮಗ ಬೀರನಿಗೆ ಅದನ್ನು ತಡೆಯಲು ಸೂಚಿಸುತ್ತಾರೆ. ಬೀರನು ವೀರಾವೇಶದಿಂದ ಹೋರಾಡಿ ಗ್ರಾಮದ ಗೋವು ಮತ್ತು ಸ್ತ್ರೀಯರನ್ನು ರಕ್ಷಿಸಿ ವೀರಮರಣ ಹೊಂದುತ್ತಾನೆ. ಅವನ ನೆನಪಿಗಾಗಿ ಈ ವೀರಗಲ್ಲನ್ನು ನಿಲ್ಲಿಸಲಾಗಿತ್ತು ಎಂದು ಗೊತ್ತಾಗಿದೆ.
ಇದನ್ನೂ ಓದಿ » ಕುಟುಂಬದವರೆಲ್ಲ ಮಲಗಿದ್ದಾಗಲೇ ಮನೆಯಲ್ಲಿ ಕಳ್ಳತನ, ಲಕ್ಷ ಲಕ್ಷದ ಚಿನ್ನಾಭರಣ, ಹಣ ನಾಪತ್ತೆ, ಹೇಗಾಯ್ತು ಘಟನೆ?
ಕೆಳಗಿನ ಪಟ್ಟಿಕೆಯಲ್ಲಿ ವೀರನು ವೈರಿಗಳೊಡನೆ ಹೋರಾಡುತ್ತಿರುವ ಕೆತ್ತನೆಯಿದೆ. ವೀರನ ಹಿಂದೆ ಗೋವುಗಳ ಚಿತ್ರಣ ಇದೆ. ಎರಡನೇ ಪಟ್ಟಿಕೆಯಲ್ಲಿ ಮಡಿದ ವೀರನನ್ನು ಸುರಾಂಗನೆಯರು ಸ್ವರ್ಗಕ್ಕೆ ಕರೆದೊಯ್ಯುವ ಚಿತ್ರಣವಿದೆ. ಮೇಲಿನ ಪಟ್ಟಿಕೆಯಲ್ಲಿ ಮಡಿದ ವೀರನು ದೇವಲೋಕದಲ್ಲಿ ಕುಳಿತ ಕೆತ್ತನೆಯಿದೆ.

ವೀರಗಲ್ಲಿನ ಎಡಭಾಗದಲ್ಲಿ ಕುಂಬಾರ ವೃತ್ತಿಯ ಚಕ್ರ ಮಡಿಕೆ ಮತ್ತು ದಂಡಗಳ ಚಿಹ್ನೆಗಳನ್ನು ಕೊರೆಯಲಾಗಿದೆ. ದೊರೆತ ವೀರಗಲ್ಲನ್ನು ಪ್ರಭಣ್ಣ ಕೊಂಡೇರ ಹಾಗೂ ಅವರ ಮಕ್ಕಳು ವ್ಯವಸ್ಥಿತವಾಗಿ ನಿಲ್ಲಿಸಿ ಅದನ್ನು ಸ್ಥಳದಲ್ಲಿಯೇ ರಕ್ಷಿಸಿ ಐತಿಹಾಸಿಕ ಪ್ರಜ್ಞೆ ಮೆರೆದಿದ್ದಾರೆ
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





