ಶಿವಮೊಗ್ಗ LIVE
ಶಿವಮೊಗ್ಗ: ಅಂತಾರಾಷ್ಟ್ರೀಯ ವಾಣಿಜ್ಯ ಮೇಳ 2026ರ ಅಂಗವಾಗಿ ಕೃಷಿ ಇಲಾಖೆಯಿಂದ ಜನವರಿ 6ರಂದು ಬೆಳಗ್ಗೆ 11ಕ್ಕೆ ಜಂಟಿ ಕೃಷಿ ನಿರ್ದೇಶಕರ ಕಚೇರಿ ಆವರಣದಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ (Millet) ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ ಆಯೋಜಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಭಾವಚಿತ್ರದೊಂದಿಗೆ ಹೆಸರು, ವಿಳಾಸ ಮತ್ತು ತಯಾರಿಸುವ ಖಾದ್ಯ, ಅದಕ್ಕೆ ಬೇಕಾಗುವ ಸಾಮಗ್ರಿಗಳು, ತಯಾರಿಸಲು ಬೇಕಾಗುವ ಸಮಯ ಹಾಗೂ ತಯಾರಿಸುವ ವಿಧಾನದ ಸಂಕ್ಷಿಪ್ತ ಮಾಹಿತಿಯ ಜತೆಗೆ ಅರ್ಜಿಯನ್ನು ಡಿ.31ರ ಒಳಗೆ ಇ-ಮೇಲ್ ವಿಳಾಸ dagrshi@gmail.com ಅಥವಾ ಖುದ್ದಾಗಿ, ಪೋಸ್ಟ್ ಮೂಲಕ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಹಳೆ ತೀರ್ಥಹಳ್ಳಿ ರಸ್ತೆ, ಶಿವಮೊಗ್ಗ. ಈ ವಿಳಾಸಕ್ಕೆ ಕಳುಹಿಸಬೇಕು ಅಥವಾ https://docs.google.com/forms/d/e/1FAlpQLSft0YCOBsqvFU_hXl5cpvHpzSCjxl5_EQrxiwRtnuO5dGWTg/viewform ಮೂಲಕ ನೋಂದಣಿ ಮಾಡಿಕೊಳ್ಳಬಹುದು.
ಪ್ರತಿ ಸ್ಪರ್ಧೆಗೆ ಸಿರಿಧಾನ್ಯದ ಒಂದು ಸಿಹಿ ಅಥವಾ ಖಾರದ ತಿನಿಸು ಅಥವಾ ಒಂದು ಮರೆತು ಹೋದ ಖಾದ್ಯ (ಸಸ್ಯಹಾರಿ ತಿನಿಸು ಮಾತ್ರ) ತಯಾರಿಸಬೇಕು. ಅರ್ಜಿಯಲ್ಲಿ ತಿಳಿಸಿದ ತಿನಿಸುಗಳನ್ನು ಮನೆಯಲ್ಲಿಯೆ ತಯಾರಿಸಿ ಪಾಕ ಸ್ಪರ್ಧೆ ನಡೆಯುವ ಸ್ಥಳದಲ್ಲಿ ಪ್ರದರ್ಶಿಸಬೇಕು. ವಿಜೇತರಿಗೆ ಪ್ರಥಮ ಬಹುಮಾನ ₹5,000., ₹3,000., ₹2,000 ಬಹುಮಾನ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ, ದೂ.08182-222635ಗೆ ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






