ಶಿವಮೊಗ್ಗ LIVE
ಶಿರಾಳಕೊಪ್ಪ: ಶಿಕಾರಿಪುರ ತಾಲೂಕಿನ ಸುಣ್ಣದಕೊಪ್ಪ, ಕೊರಟಿಕೆರೆ ಮತ್ತು ಮಾಯಿತಮ್ಮನ ಮುಚಡಿ ಗ್ರಾಮಗಳ ಸುತ್ತಮುತ್ತ ಒಂಟಿ ಸಲಗ (lone elephant) ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ಸುಣ್ಣದಕೊಪ್ಪದ ಕಡೆಗದ್ದೆಯ ಜೋಳದ ಹೊಲದಲ್ಲಿ ಆನೆಯ ಹೆಜ್ಜೆ ಗುರುತು ಮತ್ತು ಲದ್ದಿಯನ್ನು ಕಂಡ ರೈತರು ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದ್ದರು. ಭದ್ರಾ ವನ್ಯಜೀವಿ ವಲಯದಿಂದ ಬಂದ ಆನೆ ಇದಾಗಿದ್ದು ಶೆಟ್ಟಿಹಳ್ಳಿ, ಅರಸಾಳು, ರಿಪ್ಪನ್ ಪೇಟೆ, ಚೋರಡಿ, ಸೊರಬದ ಉಳವಿ, ಸಾಗದ್ದೆ, ಕೊಡಕಣಿ, ತೊಗರ್ಸಿ ಮೂಲಕ ಬ್ಯಾಡಗಿ ವರೆಗೂ ಸಂಚಾರ ನಡೆಸಿ ರಾತ್ರಿ ಹಿರೇಕೇರೂರು ಪಟ್ಟಣದಲ್ಲಿ ಸಂಚರಿಸಿ ಈಗ ತಾಳಗುಂದ ಹೋಬಳಿಯಲ್ಲಿ ಕಾಣಿಸಿಕೊಂಡಿದೆ.
ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ.ಮೋಹನ್ ಕುಮಾರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ನಾಯ್ಕ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಸಿಬ್ಬಂದಿ ಆನೆಯ ಚಲನವಲನ ಗಮನಿಸಿದಾಗ ಶಿವನ ಪಾದದ ಹತ್ತಿರ ಆನೆ ಕಂಡುಬಂದಿದೆ. ಸುಣ್ಣದಕೊಪ್ಪ, ಕೊರಟಿಕೆರೆ ಮತ್ತು ಮಾಯಿತಮ್ಮನ ಮುಚಡಿ ಗ್ರಾಮಗಳಲ್ಲಿ ರಾತ್ರಿ ವೇಳೆ ರೈತರು ಓಡಾಟ ನಡೆಸದಂತೆ ಮೈಕ್ ಮೂಲಕ ಎಚ್ಚರಿಕೆ ನೀಡಲಾಗಿದೆ. ಆನೆ ಬಂದ ದಾರಿಯಲ್ಲೆ ಕಳಿಸುವ ಪ್ರಯತ್ನ ನಡೆಯುತ್ತಿದೆ.
ಇದನ್ನೂ ಓದಿ » ಹಿಂದೂಗಳ ಹತ್ಯೆ, ದೇವಾಸ್ಥಾನಗಳು ಧ್ವಂಸ, ನಿಲ್ಲದ ದೌರ್ಜನ, ಶಿವಮೊಗ್ಗದಲ್ಲಿ ಆಕ್ರೋಶ
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





