ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿರಾಳಕೊಪ್ಪ: ಶಿಕಾರಿಪುರ ತಾಲೂಕಿನ ಸುಣ್ಣದಕೊಪ್ಪ, ಕೊರಟಿಕೆರೆ ಮತ್ತು ಮಾಯಿತಮ್ಮನ ಮುಚಡಿ ಗ್ರಾಮಗಳ ಸುತ್ತಮುತ್ತ ಒಂಟಿ ಸಲಗ (lone elephant) ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ಸುಣ್ಣದಕೊಪ್ಪದ ಕಡೆಗದ್ದೆಯ ಜೋಳದ ಹೊಲದಲ್ಲಿ ಆನೆಯ ಹೆಜ್ಜೆ ಗುರುತು ಮತ್ತು ಲದ್ದಿಯನ್ನು ಕಂಡ ರೈತರು ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದ್ದರು. ಭದ್ರಾ ವನ್ಯಜೀವಿ ವಲಯದಿಂದ ಬಂದ ಆನೆ ಇದಾಗಿದ್ದು ಶೆಟ್ಟಿಹಳ್ಳಿ, ಅರಸಾಳು, ರಿಪ್ಪನ್ ಪೇಟೆ, ಚೋರಡಿ, ಸೊರಬದ ಉಳವಿ, ಸಾಗದ್ದೆ, ಕೊಡಕಣಿ, ತೊಗರ್ಸಿ ಮೂಲಕ ಬ್ಯಾಡಗಿ ವರೆಗೂ ಸಂಚಾರ ನಡೆಸಿ ರಾತ್ರಿ ಹಿರೇಕೇರೂರು ಪಟ್ಟಣದಲ್ಲಿ ಸಂಚರಿಸಿ ಈಗ ತಾಳಗುಂದ ಹೋಬಳಿಯಲ್ಲಿ ಕಾಣಿಸಿಕೊಂಡಿದೆ.
ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ.ಮೋಹನ್ ಕುಮಾರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ನಾಯ್ಕ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಸಿಬ್ಬಂದಿ ಆನೆಯ ಚಲನವಲನ ಗಮನಿಸಿದಾಗ ಶಿವನ ಪಾದದ ಹತ್ತಿರ ಆನೆ ಕಂಡುಬಂದಿದೆ. ಸುಣ್ಣದಕೊಪ್ಪ, ಕೊರಟಿಕೆರೆ ಮತ್ತು ಮಾಯಿತಮ್ಮನ ಮುಚಡಿ ಗ್ರಾಮಗಳಲ್ಲಿ ರಾತ್ರಿ ವೇಳೆ ರೈತರು ಓಡಾಟ ನಡೆಸದಂತೆ ಮೈಕ್ ಮೂಲಕ ಎಚ್ಚರಿಕೆ ನೀಡಲಾಗಿದೆ. ಆನೆ ಬಂದ ದಾರಿಯಲ್ಲೆ ಕಳಿಸುವ ಪ್ರಯತ್ನ ನಡೆಯುತ್ತಿದೆ.
ಇದನ್ನೂ ಓದಿ » ಹಿಂದೂಗಳ ಹತ್ಯೆ, ದೇವಾಸ್ಥಾನಗಳು ಧ್ವಂಸ, ನಿಲ್ಲದ ದೌರ್ಜನ, ಶಿವಮೊಗ್ಗದಲ್ಲಿ ಆಕ್ರೋಶ
LATEST NEWS
- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





