ಶಿವಮೊಗ್ಗ: ಜಿಲ್ಲೆಯಲ್ಲಿರುವ ಎಲ್ಲ ಕೊಳಚೆ ಪ್ರದೇಶಗಳನ್ನು (slum free) ಗುರುತಿಸಿ ಅಲ್ಲಿಯ ನಿವಾಸಿಗಳಿಗೆ ಹಕ್ಕುಪತ್ರ ನೀಡಿ ಮುಖ್ಯವಾಹಿನಿಗೆ ತರಲು ಆಂದೋಲನದ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಸಚಿವ ಮಧು ಬಂಗಾರಪ್ಪ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಮಧು ಬಂಗಾರಪ್ಪ, ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಕೊಳಚೆ ಪ್ರದೇಶಗಳನ್ನು ಗುರುತಿಸಿ ನಿವಾಸಿಗಳಿಗೆ ಹಕ್ಕುಪತ್ರ, ಇ-ಸ್ವತ್ತು ನೀಡಲು ಕ್ರಮ ಜರುಗಿಸಬೇಕು ಎಂದು ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ವಿಧಾನ ಪರಿಷತ್ ಸದಸ್ಯೆ ಬಲ್ಕಿಸ್ ಬಾನು, ಜಿಲ್ಲಾ ಪಂಚಾಯಿತಿ ಸಿಇಓ ಹೇಮಂತ್ ಎನ್, ಸಿಸಿಎಫ್ ಹನುಮಂತಪ್ಪ, ಅಪರ ಜಿಲ್ಲಾಧಿಕಾರಿ ಅಭಿಷೇಕ್.ವಿ, ವಿಧಾನ ಪರಿಷತ್ ಮಾಜಿ ಸದಸ್ಯ ಪ್ರಸನ್ನಕುಮಾರ್, ಕೃಷಿ ಮಹಾವಿದ್ಯಾಲಯದ ಆಡಳಿತ ಮಂಡಳಿ ಸದಸ್ಯ ದೇವಿಕುಮಾರ್, ಎಸಿ ಸತ್ಯನಾರಾಯಣ, ಡಿಯುಡಿಸಿ ಅಧಿಕಾರಿಗಳು, ಅರಣ್ಯ ಇಲಾಖೆ ಅಧಿಕಾರಿಗಳು, ಸ್ಲಂ ಬೋರ್ಡ್ ಅಧಿಕಾರಿಗಳು, ಡಿಡಿಪಿಐ, ಇತರೆ ಇಲಾಖೆ ಅಧಿಕಾರಿಗಳು ಹಾಜರಿದ್ದರು.
