ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಅಡುಗೆ ಅನಿಲ ಸಿಲಿಂಡರ್ (cylinder) ಸ್ಪೋಟಗೊಂಡು ಮನೆ ಸಂಪೂರ್ಣ ಹಾನಿಯಾಗಿದೆ. ಸಿದ್ದೇಶ್ವರ ನಗರದ 4ನೇ ಅಡ್ಡರಸ್ತೆಯ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಹೇಗಾಯ್ತು ಘಟನೆ?
ಧರ್ಮಪ್ಪ ಎಂಬುವವರು ಬಾಡಿಗೆಗೆ ಇದ್ದ ಮನೆಯಲ್ಲಿ ಇಂದು ಬೆಳಗ್ಗೆ 11 ಗಂಟೆ ಹೊತ್ತಿಗೆ ಸಿಲಿಂಡರ್ ಸ್ಪೋಟಗೊಂಡಿದೆ. ಮನೆಯಲ್ಲಿದ್ದ ವಸ್ತುಗಳೆಲ್ಲ ಹಾನಿಯಾಗಿವೆ. ಶೀಟ್ ಛಾವಣಿ ಹಾರಿ ಹೋಗಿದೆ. ಇನ್ನು, ಧರ್ಮಪ್ಪ ಅವರ ಕುಟುಂಬದವರು ಮನೆಯಲ್ಲಿ ಇರಲಿಲ್ಲ. ಇದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಸ್ಪೋಟದ ರಭಸಕ್ಕೆ ಪಕ್ಕದ ಮನೆಗು ಹಾನಿಯಾಗಿದೆ.
ಇದನ್ನೂ ಓದಿ » ಬೆಂಗಳೂರು – ಶಿವಮೊಗ್ಗ – ಗೋಕರ್ಣ ಬಸ್ ಅಪಘಾತ, ಹಲವು ಪ್ರಯಾಣಿಕರು ಸಜೀವ ದಹನ
ಬೆಂಕಿ ಹೊತ್ತುಕೊಂಡ ಕೂಡಲೆ ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಈ ವೇಳೆ ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಶಿವಮೊಗ್ಗ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಲಕ್ಷಾಂತರ ರುಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.



LATEST NEWS
- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





