ಶಿವಮೊಗ್ಗ: ಕರ್ನಾಟಕ ಸಂಘದ ಎದುರಿಗೆ ಇರುವ ಕೆನರಾ ಬ್ಯಾಂಕ್ ಎಟಿಎಂನಲ್ಲಿ (Bank ATM) ಮಹಿಳೆಯೊಬ್ಬರಿಗೆ ನಂಬಿಸಿ ಹಣ ದೋಚಿರುವ ಘಟನೆ ನಡೆದಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಕೆಲಸ ಹುಡುಕುತ್ತಿರುವವರಿಗೆ GOOD NEWS, ಇಲ್ಲಿದೆ ಉತ್ತಮ ವೇತನದ ಉದ್ಯೋಗ
ಹೊಳೆಹೊನ್ನೂರಿನ ಶಿವಮ್ಮ ಎಂಬುವವರು ಹಣ ಬಿಡಿಸಲು ಎಟಿಎಂ ಕೇಂದ್ರಕ್ಕೆ ಹೋಗಿದ್ದರು. ಅಲ್ಲಿಯೇ ಇದ್ದ ಅಪರಿಚಿತ ವ್ಯಕ್ತಿಯೊಬ್ಬ ಹಣ ಬಿಡಿಸಿಕೊಡುವುದಾಗಿ ನಂಬಿಸಿದ್ದಾನೆ. ಆತನ ಮಾತು ನಂಬಿ ಮಹಿಳೆಯು ತನ್ನ ಎಟಿಎಂ ಕಾರ್ಡ್ ಹಾಗೂ ಪಿನ್ ನೀಡಿದ್ದಾರೆ.
ವ್ಯಕ್ತಿಯು ಹಣ ಬರುತ್ತಿಲ್ಲ ಎಂದು ಸುಳ್ಳು ಹೇಳಿ, ಮಹಿಳೆಗೆ ಅವರ ಕಾರ್ಡ್ ಬದಲಿಗೆ ಬೇರೊಂದು ಕಾರ್ಡ್ ನೀಡಿ ವಂಚಿಸಿದ್ದಾನೆ. ನಂತರ ಮಹಿಳೆಯು ಬ್ಯಾಂಕ್ಗೆ ಹೋಗಿ ವಿಚಾರಿಸಿದಾಗ ಅವರ ಖಾತೆಯಿಂದ ಒಟ್ಟು ₹24,300 ಹಣ ಡ್ರಾ ಆಗಿರುವುದು ಬೆಳಕಿಗೆ ಬಂದಿದೆ. ಎಟಿಎಂ ಕಾರ್ಡ್ ಪರಿಶೀಲಿಸಿದಾಗ ಅದು ತಮ್ಮದಲ್ಲ ಎಂಬುದು ದೃಢಪಟ್ಟಿದೆ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








