ಶಿವಮೊಗ್ಗ LIVE
ಶಿವಮೊಗ್ಗ: ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧ ರಸ್ತೆ, ಫುಟ್ಪಾತ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ಬದಿ ವ್ಯಾಪಾರದ ಕೈಗಾಡಿಗಳು ನಿಷ್ಕ್ರಿಯ, ಅನುಪಯುಕ್ತ, ಕಬ್ಬಿನ ಹಾಲಿನ ಗಾಡಿ, ಐಸ್ ಕ್ರೀಂ ಗಾಡಿ ಇತ್ಯಾದಿ ಮಾರಾಟ ಪರಿಕರಗಳು, ತಾತ್ಕಾಲಿಕ ಶೆಡ್ ಗಳು ಇತ್ಯಾದಿಯನ್ನು ಅನಧಿಕೃತವಾಗಿ ಬಿಟ್ಟಿರುವುದು (Unused items) ಕಂಡು ಬಂದಿದೆ. ಅವುಗಳನ್ನು ತೆರವುಗೊಳಿಸಲು ಪಾಲಿಕೆ ತೀರ್ಮಾನಿಸಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಪ್ರಕಟಣೆ ಹೊರಡಿಸಿದ 15 ದಿನದೊಳಗೆ ಸಂಬಂಧಿಸಿದವರು ಕೂಡಲೇ ತಮ್ಮ ಅನುಪಯುಕ್ತ, ನಿಷ್ಕ್ರಿಯ ಅಥವಾ ವ್ಯಾಪಾರ ಮುಗಿದ ನಂತರ ಅಲ್ಲೇ ಬಿಟ್ಟಿರುವ ಗಾಡಿ, ಅನುಪಯುಕ್ತ ವಸ್ತು ಇತ್ಯಾದಿಗಳನ್ನು ತೆರವುಗೊಳಿಸಬೇಕು. ತಪ್ಪಿದಲ್ಲಿ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ಪಾಲಿಕೆ ವತಿಯಿಂದ ಈ ಸಾಮಗ್ರಿಗಳನ್ನು ವಶಪಡಿಸಿಕೊಂಡು ಸ್ಕ್ರಾಪ್ ಮಾಡುವುದಲ್ಲದೇ ಸಂಬಂಧಿಸಿದವರ ಮೇಲೆ ದಂಡ ಹಾಗೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ವೈಭವದ ತೆಪ್ಪೋತ್ಸವ, ಇಲ್ಲಿವೆ 12 ಫೋಟೊಗಳು, ಹೇಗಿತ್ತು ವ್ಯವಸ್ಥೆ?
LATEST NEWS
- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

- ಶಾಲೆಯ ಕೊಠಡಿಯಲ್ಲೇ ನೇಣು ಬಿಗಿದುಕೊಂಡ ಶಿಕ್ಷಕ

About The Editor
ನಿತಿನ್ ಆರ್.ಕೈದೊಟ್ಲು





