ಶಿವಮೊಗ್ಗ LIVE
ಶಿವಮೊಗ್ಗ: ಭದ್ರಾವತಿಯ ಗೊಂದಿ ಕೈಮರದ ಬಳಿ ದರೋಡೆಗೆ ಹೊಂಚು ಹಾಕುತ್ತಿದ್ದ ಆರೋಪ ಸಾಬೀತಾದ ಹಿನ್ನೆಲೆ ಐದು ಜನರಿಗೆ ಭದ್ರಾವತಿಯ ನ್ಯಾಯಾಲಯ 10 ವರ್ಷ ಜೈಲು (Jail) ಶಿಕ್ಷೆ, ₹50,000 ದಂಡ ವಿಧಿಸಿ ಆದೇಶಿಸಿದೆ.
ಇದನ್ನೂ ಓದಿ » ಶಿವಮೊಗ್ಗ ಪಾಲಿಕೆಯಿಂದ ಮಹತ್ವದ ಪ್ರಕಟಣೆ, 15 ದಿನದ ಗಡುವು, ತಪ್ಪಿದಲ್ಲಿ ಕಾನೂನು ಕ್ರಮ ಗ್ಯಾರಂಟಿ
2019ರ ಫೆಬ್ರವರಿಯಲ್ಲಿ ಮಾರಕಾಸ್ತ್ರ, ಖಾರದ ಪುಡಿ ಹಿಡಿದುಕೊಂಡು ವಾಹನಗಳ ದರೋಡೆಗೆ ಯತ್ನಿಸಿದ ಕುರಿತು ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತನಿಖೆ ನಡೆಸಿದ ಎಎಸ್ಐ ಹುಚ್ಚಪ್ಪ ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಿದ್ದರು.
ಆರೋಪ ಸಾಬೀತಾದ ಹಿನ್ನೆಲೆ ಆರೋಪಿಗಳಾದ ಟಿಪ್ಪುನಗರದ ಇಮ್ರಾನ್ ಷರೀಫ್ (33), ಹನೀಫುಲ್ಲಾ ಖಾನ್ (22), ಕಡೇಕಲ್ಲಿನ ಅಬೀದ್ ಖಾನ್ (35), ಮುಜಾಹಿದ್ (40), ನಸ್ರುಲ್ಲಾ(29)ಗೆ ನ್ಯಾಯಾಧಿಶರಾದ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸರಕಾರದ ಪರ ಪಿ.ರತ್ನಮ್ಮ ವಾದ ಮಂಡಿಸಿದ್ದರು.
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






