ಫೋನ್‌‌ ಕರೆ, ಶಿವಮೊಗ್ಗದಿಂದ ವ್ಯಕ್ತಿ ದೌಡು, ಆನವಟ್ಟಿ ಮನೆ ಬಳಿ ಕಾದಿತ್ತು ಶಾಕ್

ಸೊರಬ: ಆನವಟ್ಟಿಯ ದಾನಮ್ಮ ಬಡಾವಣೆಯಲ್ಲಿ ಮನೆಯೊಂದರ ಬಾಗಿಲಿನ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣ ಕಳ್ಳತನ (House burglary) ಮಾಡಲಾಗಿದೆ. ಹೆಚ್.ಜಿ. ಮಂಜುನಾಥ್ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ.➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಮಂಜುನಾಥ್ ಅವರು ತಮ್ಮ ಪತ್ನಿಯ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ಹೋಗಿದ್ದ ಸಮಯ ಕೃತ್ಯ ನಡೆದಿದೆ. ನೆರೆಹೊರೆಯವರು ಕರೆ ಮಾಡಿ ಮನೆಯ ಮುಂಭಾಗದ ಬಾಗಿಲು ತೆರೆದಿರುವ ಬಗ್ಗೆ ತಿಳಿಸಿದ್ದರು. ತಕ್ಷಣ ಮಂಜುನಾಥ್ ಅವರು ಶಿವಮೊಗ್ಗದಿಂದ ವಾಪಸ್ ಬಂದು ನೋಡಿದಾಗ, ಕಳ್ಳರು ಮನೆಯ ಬಾಗಿಲು ಮತ್ತು ಒಳಗಿನ ಎರಡು ಬೀರುಗಳ ಬೀಗ ಮುರಿದಿದ್ದರು.

soraba anavatti graphics

ಬೀರುವಿನಲ್ಲಿದ್ದ  ಒಟ್ಟು 72 ಗ್ರಾಂ ಚಿನ್ನದ ಆಭರಣ, 250 ಗ್ರಾಂ ಬೆಳ್ಳಿ ವಸ್ತು ಹಾಗೂ ₹5,000 ನಗದು ದೋಚಿರುವುದು ಗೊತ್ತಾಗಿದೆ. ₹4,00,000 ಮೌಲ್ಯದ ವಸ್ತುಗಳು ಕಳುವಾಗಿವೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಆನವಟ್ಟಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಗಾಜನೂರಿನ ಮದ್ಯದಂಗಡಿ ಮೇಲೆ ಮಹಿಳೆಯರ ದಾಳಿ, ದೂರು, ಪ್ರತಿದೂರು, ದಾಖಲಾಯ್ತು ಮೂರು ಕೇಸ್‌

Leave a Comment