ಶಿವಮೊಗ್ಗ LIVE
ಶಿವಮೊಗ್ಗ: ಹೆಗ್ಗೋಡು – ಭೀಮನಕೋಣೆಯ ಚರಕ ಮಹಿಳಾ ವಿವಿಧೋದ್ದೇಶ ಕೈಗಾರಿಕಾ ಸಹಕಾರ ಸಂಘವು ಜನವರಿ 17ರಿಂದ 19ರವರೆಗೆ ಬೆಳಿಗ್ಗೆ 10ರಿಂದ ರಾತ್ರಿ 7.30ರವರೆಗೆ ನಗರದ ಬಿ.ಎಚ್.ರಸ್ತೆಯ ಕರ್ನಾಟಕ ಸಂಘದಲ್ಲಿ ನೈಸರ್ಗಿಕ ಬಣ್ಣದ ಅಪ್ಪಟ ಹತ್ತಿ ಕೈಮಗ್ಗದ ಹಾಗೂ ಕೈ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ (Exhibition) ಹಮ್ಮಿಕೊಂಡಿದೆ.
17ರಂದು ಬೆಳಿಗ್ಗೆ 11.30ಕ್ಕೆ ಜನಶಿಕ್ಷಣ ಸಂಸ್ಥೆಯ ನಿರ್ದೇಶಕಿ ಎಸ್.ವೈ.ಅರುಣಾದೇವಿ ಮೇಳಕ್ಕೆ ಚಾಲನೆ ನೀಡುವರು. ಅತಿಥಿಗಳಾಗಿ ಸಂಸ್ಕೃತಿ ಚಿಂತಕ ಪ್ರೊ.ರಾಜೇಂದ್ರ ಚೆನ್ನಿ, ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕ ಶಿವಲಿಂಗಪ್ಪ ಎನ್. ಕುಂಬಾರ, ಸಂಘಟಕಿ ಟಿ.ಗಾಯತ್ರಿ ಭಾಗವಹಿಸುವರು. ಚರಕ ಸಂಘದ ಅಧ್ಯಕ್ಷೆ ಮಹಾಲಕ್ಷ್ಮಿ ಅಧ್ಯಕ್ಷತೆ ವಹಿಸುವರು.
ಮೇಳದಲ್ಲಿ ಏನೇನೆಲ್ಲ ಇರಲಿದೆ?
» ಮೇಳದಲ್ಲಿ ಒಟ್ಟು 8 ಮಳಿಗೆಗಳು ಇರಲಿವೆ. ಚರಕದ ನೈಸರ್ಗಿಕ ಬಣ್ಣದ ಕೈಮಗ್ಗದ ಬಟ್ಟೆಗಳು, ಸಿದ್ಧ ಉಡುಪು ಇರಲಿವೆ.
» ಗಜೇಂದ್ರಗಡದ ನೇಕಾರರ ಅಪರೂಪದ ಸೀರೆ, ಇತರೆ ಬಟ್ಟೆಗಳು ಇರಲಿವೆ.
» ಶಿರಸಿಯ ತೇಜಸ್ವಿನಿ ಅವರು ಸಿರಿಧಾನ್ಯದಿಂದ ತಯಾರಿಸಿದ ವೈವಿಧ್ಯಮಯ ಆಹಾರ ಉತ್ಪನ್ನ ಧಾಮಿನಿ ನ್ಯಾಚುರಲ್ಸ್ ಅವರ ಮಲೆನಾಡಿನ ವೈವಿಧ್ಯಮಯ ಉಪ್ಪಿನಕಾಯಿ.
» ಶಿರಸಿಯ ಚೇತನಾ ಸಂಸ್ಥೆಯ ಬಾಳೆನಾರಿನ ಉತ್ಪನ್ನ ಚಿತ್ರಾ ಗಿರೀಶ್ ಅವರ ಟೆರಾಕೋಟಾ (ಮಣ್ಣಿನ) ಉತ್ಪನ್ನ ಮಣ್ಣಿನ ಆಭರಣ, ಗೀತಾಂಜಲಿ ಬುಕ್ಸೆಂಟರ್ನ ಪುಸ್ತಕಗಳು ಲಭ್ಯ ಇವೆ.
ಈ ಮೇಳವನ್ನು ರಾಜ್ಯ ಕೈಮಗ್ಗ ಮತ್ತು ಜವಳಿ ಇಲಾಖೆಯ ಪವಿತ್ರ ವಸ್ತ್ರ ಯೋಜನೆಯಡಿ ಆಯೋಜಿಸಲಾಗಿದೆ. ಮಾಹಿತಿಗೆ ಮೊ: 63638 85215 ಸಂಪರ್ಕಿಸಬಹುದು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಡಾಗ್ ಶೋ, ರಿಜಿಸ್ಟರ್ ಮಾಡಿಕೊಳ್ಳಲು ಸೂಚನೆ, ಯಾವಾಗ? ಎಲ್ಲಿ ನಡೆಯುತ್ತೆ?
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






