ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ನಗರದ ಕುವೆಂಪು ರಸ್ತೆಯಲ್ಲಿ ನಂಜಪ್ಪ ಆಸ್ಪತ್ರೆ ಎದುರಿಗಿರುವ ಮರದಿಂದ ದ್ರವ ರೂಪದ ಅಂಟು ರಸ್ತೆಗೆ ಬಿದ್ದು ದ್ವಿಚಕ್ರ ವಾಹನ ಸವಾರರು ಜಾರಿ (bikes to skid) ಬಿದ್ದಿದ್ದಾರೆ. ಕಳೆದ ರಾತ್ರಿ ಸುರಿದ ಮಳೆಯ ನಂತರ ಘಟನೆ ಸಂಭವಿಸಿದೆ.
ಮಳೆ ನಿಲ್ಲುತ್ತಿದ್ದಂತೆ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ಐದಾರು ಬೈಕು ಜಾರಿ ಬಿದ್ದಿವೆ. ವಾಹನ ಸವಾರರು ಗಾಯಗೊಂಡಿದ್ದಾರೆ. ಅಕ್ಕಪಕ್ಕದ ಅಂಗಡಿಯವರು ಗಾಯಾಳುಗಳಿಗೆ ನೆರವಾಗಿದ್ದು, ಕೂಡಲೆ ಸಂಚಾರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ದೌಡು
ಸ್ಥಳಕ್ಕೆ ದೌಡಾಯಿಸಿದ ಸಂಚಾರ ಠಾಣೆ ಪೊಲೀಸರು ರಸ್ತೆಯ ಎರಡು ಬದಿ ಬ್ಯಾರಿಕೇಡ್ ಅಳವಡಿಸಿ ವಾಹನಗಳು ನಿಧಾನವಾಗಿ ಚಲಿಸುವಂತೆ ಸೂಚಿಸಿದರು. ಇನ್ಸ್ಪೆಕ್ಟರ್ ದೇವರಾಜ್ ಅವರು ಮಹಾನಗರ ಪಾಲಿಕೆಗೆ ಮಾಹಿತಿ ನೀಡಿ, ವಾಟರ್ ಟ್ಯಾಂಕರ್ ತರಿಸಿ ನೀರಿ ಹಾಯಿಸಿ ಸ್ವಚ್ಛತೆ ಕಾರ್ಯಕ್ಕೆ ನಡೆಸಿದರು. ಇದರಿಂದ ಸುಗಮ ಸಂಚಾರಕ್ಕೆ ಅನುವಾಯಿತು.

ಸ್ಕಿಡ್ ಆಗಿ ಬಿದ್ದಿದ್ದು ಇದೇ ಮೊದಲಲ್ಲ
ಮರದಿಂದ ದ್ರವ ರೂಪದ ಅಂಟು ಬಿದ್ದು ವಾಹನ ಸವಾರರು ಜಾರಿ ಬೀಳುತ್ತಿರುವುದು ಇದೇ ಮೊದಲಲ್ಲ. 2021ರಲ್ಲಿ ಬೆಳ್ಳಂಬೆಳಗ್ಗೆ ಹಲವು ವಾಹನಗಳು ಇದೇ ರೀತಿ ಜಾರಿ ಬಿದ್ದು ಸವಾರರು ಗಾಯಗೊಂಡಿದ್ದರು.
ಇದನ್ನೂ ಓದಿ » ಕೆಂಚನಾಲ ಮಾರಿಕಾಂಬ ಜಾತ್ರೆ, ರಾಜ್ಯದ ಎಲ್ಲೆಡೆಗಿಂತಲು ವಿಭಿನ್ನ, ಹೇಗಿರುತ್ತೆ ಮಹೋತ್ಸವ?
LATEST NEWS
- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

About The Editor
ನಿತಿನ್ ಆರ್.ಕೈದೊಟ್ಲು





