ಶಿವಮೊಗ್ಗ LIVE
ಶಿಕಾರಿಪುರ: ಬಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ (Teacher) ಧನಂಜಯಪ್ಪ (51) ಶಾಲೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳವಾರ ಘಟನೆ ನಡೆದಿದೆ.
ಇದನ್ನೂ ಓದಿ » ಶಿವಮೊಗ್ಗದ ಈ ರಸ್ತೆಯಲ್ಲಿ ಜಾರಿ ಬಿದ್ದ ಸಾಲು ಸಾಲು ಬೈಕುಗಳು, ಆಗಿದ್ದೇನು?

ತರಗತಿಯ ಕೊಠಡಿಯಲ್ಲಿದ್ದ ಮಕ್ಕಳನ್ನು ಹೊರಗೆ ಕಳುಹಿಸಿದ್ದ ಧನಂಜಯಪ್ಪ ಅವರು ಬಾಗಿಲು ಹಾಕಿಕೊಂಡು ನೇಣು ಬಿಗಿದುಕೊಂಡಿದ್ದಾರೆ. ಸ್ವಲ್ಪ ಸಮಯದ ನಂತರ ಶಾಲೆಯ ಶಿಕ್ಷಕರು ಇದನ್ನು ಗಮನಿಸಿ, ಧನಂಜಯಪ್ಪ ಅವರನ್ನು ಕೂಡಲೆ ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.
ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಮೂಲತಃ ಜೀನಹಳ್ಳಿಯವರಾದ ಇವರು ಹೊನ್ನಾಳಿಯಿಂದ ಬಳೂರು ಶಾಲೆಗೆ ಪ್ರತಿದಿನ ಓಡಾಡುತ್ತಿದ್ದರು. ಐದಾರು ವರ್ಷಗಳಿಂದ ಬಳೂರು ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರಿಗೆ ಪತ್ನಿ, ಇಬ್ಬರು ಪುತ್ರಿಯರಿದ್ದಾರೆ. ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

- ಶಾಲೆಯ ಕೊಠಡಿಯಲ್ಲೇ ನೇಣು ಬಿಗಿದುಕೊಂಡ ಶಿಕ್ಷಕ

- ಶಿವಮೊಗ್ಗದ ಈ ರಸ್ತೆಯಲ್ಲಿ ಜಾರಿ ಬಿದ್ದ ಸಾಲು ಸಾಲು ಬೈಕುಗಳು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






