ಶಿವಮೊಗ್ಗ LIVE
ಶಿವಮೊಗ್ಗ: ಜಿಲ್ಲೆಯ ಎಲ್ಲ ತಾಲೂಕಿಗು ರೈಲ್ವೆ (Shimoga Railway) ಸಂಪರ್ಕ ಕಲ್ಪಿಸುವ ಗುರಿ ಇದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಪ್ರೆಸ್ಟ್ ಟ್ರಸ್ಟ್ ಮತ್ತು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ಜಿಲ್ಲೆಯ ರೈಲ್ವೆ ಯೋಜನೆಗಳ ಕುರಿತು ಮಾಹಿತಿ ನೀಡಿದರು.
ಸಂಸದ ರಾಘವೇಂದ್ರ ಏನೆಲ್ಲ ಹೇಳಿದರು? ಇಲ್ಲಿದೆ ಪಾಯಿಂಟ್ಸ್
1 ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲ್ವೆ ಯೋಜನೆ: ಈ ಬಹುನಿರೀಕ್ಷಿತ ರೈಲ್ವೆ ಮಾರ್ಗದ ಕಾಮಗಾರಿಗೆ ಸಂಬಂಧಿಸಿದಂತೆ ಈಗಾಗಲೇ ಶೇ. 75 ರಷ್ಟು ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದೆ. ರೈತರಿಗೆ ಪರಿಹಾರದ ಹಣವನ್ನು ವಿತರಿಸಲು ಇನ್ನೂ ಸುಮಾರು 100 ಕೋಟಿ ರೂಪಾಯಿಗಳ ಅನುದಾನದ ಅವಶ್ಯಕತೆಯಿದೆ. ಈ ಭೂಸ್ವಾಧೀನ ಪ್ರಕ್ರಿಯೆಯು ಒಟ್ಟಾರೆ ಶೇ. 90 ರಷ್ಟು ಪೂರ್ಣಗೊಂಡ ತಕ್ಷಣವೇ ರೈಲ್ವೆ ಇಲಾಖೆಯು ಕಾಮಗಾರಿಯ ಟೆಂಡರ್ ಪ್ರಕ್ರಿಯೆಯನ್ನು ಆರಂಭಿಸಲಿದೆ.
ಇದನ್ನೂ ಓದಿ » ಶಿವಮೊಗ್ಗ ಜಿಲ್ಲಾಧಿಕಾರಿಗೆ ಸೈಬರ್ ವಂಚಕರ ಕಾಟ, ಆಗಿದ್ದೇನು? ಪ್ರಕಟಣೆಯಲ್ಲಿ ಡಿಸಿ ಹೇಳಿದ್ದೇನು?
3 ಶಿವಮೊಗ್ಗ – ಕೋಟೆಗಂಗೂರು ದ್ವಿಪಥ ಮಾರ್ಗ: ಶಿವಮೊಗ್ಗದಿಂದ ಬೀರೂರಿನವರೆಗೆ ದ್ವಿಪಥ ಮಾರ್ಗ ಆಗಬೇಕಿದೆ. ಅದನ್ನು ಕೋಟೆಗಂಗೂರಿನಲ್ಲಿ ನಿರ್ಮಾಣವಾಗುತ್ತಿರುವ ಹೊಸ ಟರ್ಮಿನಲ್ವರೆಗೆ ವಿಸ್ತರಿಸಲಾಗುತ್ತದೆ. ಈ ದ್ವಿಪಥ ಮಾರ್ಗವು ಪೂರ್ಣಗೊಂಡಲ್ಲಿ ರೈಲುಗಳ ಸಂಚಾರದ ವೇಗ ಮತ್ತು ಸಾಮರ್ಥ್ಯ ಹೆಚ್ಚಾಗಲಿದೆ.4 ವಂದೇ ಭಾರತ್ ರೈಲು ವಿಳಂಬಕ್ಕೆ ಕಾರಣ: ಶಿವಮೊಗ್ಗಕ್ಕೆ ವಂದೇ ಭಾರತ್ ರೈಲನ್ನು ತರುವ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ನಿರೀಕ್ಷೆಯಿದೆ. ಆದರೆ, ಈ ರೈಲು ಆರಂಭವಾಗಲು ಕೋಟೆಗಂಗೂರಿನ ರೈಲ್ವೆ ಟರ್ಮಿನಲ್ ಕಾಮಗಾರಿ ಪೂರ್ಣಗೊಳ್ಳುವುದು ಅತ್ಯಗತ್ಯವಾಗಿದೆ. ವಂದೇ ಭಾರತ್ ರೈಲಿಗೆ ಅಗತ್ಯವಿರುವ ಶುಚಿಗೊಳಿಸುವಿಕೆ, ನಿರ್ವಹಣೆ ಮತ್ತು ಪ್ಲಾಟ್ಫಾರ್ಮ್ ಸೌಲಭ್ಯಗಳು ಕೋಟೆಗಂಗೂರು ಟರ್ಮಿನಲ್ನಲ್ಲಿ ಲಭ್ಯವಿರಲಿವೆ. ಅಲ್ಲಿಯವರೆಗೆ ತಾಂತ್ರಿಕ ಕಾರಣಗಳಿಂದಾಗಿ ವಂದೇ ಭಾರತ್ ರೈಲು ಸಂಚಾರ ಆರಂಭಿಸುವುದು ಸ್ವಲ್ಪ ವಿಳಂಬವಾಗಬಹುದು.


8 ತಾಳಗುಪ್ಪ – ಶಿರಸಿ – ಹುಬ್ಬಳ್ಳಿ ಮಾರ್ಗ: ಈ ಹಿಂದೆಯೇ ಪ್ರಸ್ತಾಪಿಸಲಾಗಿದ್ದ ತಾಳಗುಪ್ಪ – ಶಿರಸಿ – ಹುಬ್ಬಳ್ಳಿ ರೈಲ್ವೆ ಮಾರ್ಗದ ಬಗ್ಗೆಯೂ ಚರ್ಚೆ ಇದೆ. ಇದು ಪ್ರಯಾಣಿಕರಿಗಷ್ಟೇ ಅಲ್ಲದೆ ಈ ಭಾಗದ ಕೃಷಿ ಉತ್ಪನ್ನಗಳ ಸಾಗಾಣಿಕೆಗೂ ದೊಡ್ಡ ಮಟ್ಟದ ನೆರವು ನೀಡಲಿದೆ. ಸರ್ವೇ ಕಾರ್ಯಗಳನ್ನು ಆದಷ್ಟು ಬೇಗ ಮುಗಿಸಿ ಕೇಂದ್ರ ರೈಲ್ವೆ ಇಲಾಖೆಗೆ ವರದಿ ಸಲ್ಲಿಸುವ ಗುರಿ ಹೊಂದಲಾಗಿದೆ.
LATEST NEWS
- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

- ಶಾಲೆಯ ಕೊಠಡಿಯಲ್ಲೇ ನೇಣು ಬಿಗಿದುಕೊಂಡ ಶಿಕ್ಷಕ

About The Editor
ನಿತಿನ್ ಆರ್.ಕೈದೊಟ್ಲು





