ಮಡಿಕೆಚೀಲೂರು: 19ಕ್ಕೂ ಹೆಚ್ಚು ಜನರ ವಿರುದ್ಧ ಪೊಲೀಸರಿಂದ ಸ್ವಯಂ ಪ್ರೇರಿತ ದೂರು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ: ಮಡಿಕೆಚೀಲೂರು ಗ್ರಾಮದಲ್ಲಿ ರಸ್ತೆ ತಡೆ (Highway) ನಡೆಸಿ ಸಂಚಾರಕ್ಕೆ ಅಡ್ಡಿಪಡಿಸಿದ ಘಟನೆಗೆ ಸಂಬಂಧಿಸಿದಂತೆ ಸುಮಾರು 19 ಮಂದಿ ವಿರುದ್ಧ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾನೂನು ಬಾಹಿರವಾಗಿ ಗುಂಪು ಕಟ್ಟಿಕೊಂಡು ಸಂಚಾರಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಜವನರಿ 15 ರಂದು ತಡರಾತ್ರಿ ಮಡಿಕೆಚೀಲೂರು ಗ್ರಾಮದ ಬಸ್ ನಿಲ್ದಾಣದ ಬಳಿ ಶಿವಮೊಗ್ಗ -ಹೊನ್ನಾಳಿ ರಾಜ್ಯ ಹೆದ್ದಾರಿಯಲ್ಲಿ ಸುಮಾರು 60-70 ಜನರು ರಸ್ತೆ ತಡೆ ನಡೆಸಿದರು. ಇದರಿಂದ ವಾಹನಗಳು ಹಾಗೂ ಆಂಬುಲೆನ್ಸ್ ಸಂಚಾರಕ್ಕೆ ತೊಂದರೆಯಾಗಿತ್ತು ಎಂದು ಆರೋಪಿಸಲಾಗಿದೆ. ಪೊಲೀಸ್‌ ಸಿಬ್ಬಂದಿ ಮನವಿ ಮಾಡಿದರು ಪ್ರತಿಭಟನಾಕಾರರು ರಸ್ತೆ ತೆರವುಗೊಳಿಸಿರಲಿಲ್ಲ.

301123-Shimoga-Rural-Police-Station.webp

ಇದನ್ನೂ ಓದಿ » ಶಿವಮೊಗ್ಗದಲ್ಲಿ ಧಗಧಗ ಹೊತ್ತಿ ಉರಿದ ಬಟ್ಟೆ ಅಂಗಡಿ, ಜ್ಯೂಸ್‌ ಸೆಂಟರ್‌

ಪೊಲೀಸ್‌ ಸಿಬ್ಬಂದಿ ಮನವಿ ಮಾಡಿದರು ಪ್ರತಿಭಟನಾಕಾರರು ರಸ್ತೆ ತೆರವುಗೊಳಿಸಿರಲಿಲ್ಲ. ಇನ್ಸ್‌ಪೆಕ್ಟರ್ ಅವರು ಹೆಚ್ಚಿನ ಸಿಬ್ಬಂದಿಯೊಂದಿಗೆ ಆಗಮಿಸಿ ಜನರಿಗೆ ಮನವರಿಕೆ ಮಾಡಿ ರಸ್ತೆಯನ್ನು ಸುಗಮಗೊಳಿಸಿದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ.
 

Total-Readers-of-Shivamogga-Live

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment