ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Airport) ರಾಷ್ಟ್ರಕವಿ ಕುವೆಂಪು ಹೆಸರನ್ನು ಕೇಂದ್ರ ಸರ್ಕಾರದಿಂದ ಘೋಷಣೆ ಮಾಡಿಸಲು ಕ್ರಮ ಕೈಗೊಳ್ಳುವುದಾಗಿ ಸಂಸದ ಬಿ.ವೈ. ರಾಘವೇಂದ್ರ ಇಂದು ಭರವಸೆ ನೀಡಿದ್ದಾರೆ ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ನ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ಹೇಳಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ – ಒಂದು ಮೆಸೇಜ್, ಶಿವಮೊಗ್ಗದ ವ್ಯಕ್ತಿಯ ಬ್ಯಾಂಕ್ ಖಾತೆಯಿಂದ ₹6.50 ಲಕ್ಷ ಮಾಯ, ಏನಿತ್ತು ಮೆಸೇಜ್ನಲ್ಲಿ?
ವಿನೋಬನಗರದ ಸಂಸದರ ನಿವಾಸದಲ್ಲಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ವತಿಯಿಂದ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ಸಂಸದ ರಾಘವೇಂದ್ರ ಹೆಸರು ಘೋಷಣೆಯ ಭರವಸೆ ನೀಡಿದ್ದಾರೆ ಎಂದು ತಿಳಿಸಲಾಗಿದೆ.

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು, ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ವಿಜಯಪುರ ವಿಮಾನ ನಿಲ್ದಾಣಕ್ಕೆ ಜಗಜ್ಯೋತಿ ಬಸವಣ್ಣ ಹಾಗೂ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರನ್ನು ಘೋಷಣೆ ಬಾಕಿ ಇದೆ. ಎರಡೂವರೆ ವರ್ಷಗಳ ಹಿಂದೆಯೇ ರಾಜ್ಯ ಸರ್ಕಾರ ನಾಲ್ಕು ವಿಮಾನ ನಿಲ್ದಾಣಗಳ ಹೆಸರು ಶಿಫಾರಸು ಮಾಡಿದೆ.
ಕೇಂದ್ರ ಸರ್ಕಾರದಿಂದ ಘೋಷಣೆ ಬಾಕಿ ಇದೆ ಎಂದು ಟ್ರಸ್ಟ್ ಮನವಿಯಲ್ಲಿ ತಿಳಿಸಲಾಗಿದೆ. ಟ್ರಸ್ಟ್ನ ಮುಖಂಡರಾದ ಮೇಘರಾಜ್, ಕಲ್ಲೂರು ಶಂಕ್ರಾನಾಯ್ಕ, ಅಲೀಂಖಾನ್, ಬಸವರಾಜ್, ಕೆ.ಆರ್. ಶಿವಣ್ಣ, ಭ್ರಮೇಶ್ವರ್ ಯುವರಾಜ್ ಇದ್ದರು.
LATEST NEWS
- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

- ಶಿವಮೊಗ್ಗ ಸಿಟಿಯ ಹಲವೆಡೆ ಜನವರಿ 29, 30ರಂದ ಅರ್ಧ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗದಲ್ಲಿ ವಿದ್ಯಾರ್ಥಿಗಳೇ ಟ್ರಾಫಿಕ್ ಪೊಲೀಸರಾದರು, ಸಂಚಾರ ನಿಯಂತ್ರಿಸಿದರು, ಕಾರಣವೇನು?

- ಕರ್ನಾಟಕ ಸಂಘದಿಂದ ಪುಸ್ತಕಗಳಿಗೆ ಬಹುಮಾನ, ಕೃತಿಗಳಿಗೆ ಆಹ್ವಾನ, ಇಲ್ಲಿದೆ ಕಂಪ್ಲೀಟ್ ವಿವರ

- ಮಂಡಿ, ಕಾಲು ನೋವು, ಬಾಣಂತಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





