ಶಿವಮೊಗ್ಗ ವಿಮಾನ ನಿಲ್ದಾಣದ ಹೆಸರಿನ ವಿಚಾರ, ಸಂಸದರಿಗೆ ಮನವಿ, ಏನಿದೆ ಮನವಿ ಕಾಪಿಯಲ್ಲಿ?

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Airport) ರಾಷ್ಟ್ರಕವಿ ಕುವೆಂಪು ಹೆಸರನ್ನು ಕೇಂದ್ರ ಸರ್ಕಾರದಿಂದ ಘೋಷಣೆ ಮಾಡಿಸಲು ಕ್ರಮ ಕೈಗೊಳ್ಳುವುದಾಗಿ ಸಂಸದ ಬಿ.ವೈ. ರಾಘವೇಂದ್ರ ಇಂದು ಭರವಸೆ ನೀಡಿದ್ದಾರೆ ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ಹೇಳಿದ್ದಾರೆ.

ಇದನ್ನೂ ಓದಿ – ಒಂದು ಮೆಸೇಜ್‌, ಶಿವಮೊಗ್ಗದ ವ್ಯಕ್ತಿಯ ಬ್ಯಾಂಕ್‌ ಖಾತೆಯಿಂದ ₹6.50 ಲಕ್ಷ ಮಾಯ, ಏನಿತ್ತು ಮೆಸೇಜ್‌ನಲ್ಲಿ?

ವಿನೋಬನಗರದ ಸಂಸದರ ನಿವಾಸದಲ್ಲಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್‌ ವತಿಯಿಂದ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ಸಂಸದ ರಾಘವೇಂದ್ರ ಹೆಸರು ಘೋಷಣೆಯ ಭರವಸೆ ನೀಡಿದ್ದಾರೆ ಎಂದು ತಿಳಿಸಲಾಗಿದೆ.

Shanthaverig-Gopalagowda-trust-memorandum-to-MP-BY-Raghavendra

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು, ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ವಿಜಯಪುರ ವಿಮಾನ ನಿಲ್ದಾಣಕ್ಕೆ ಜಗಜ್ಯೋತಿ ಬಸವಣ್ಣ ಹಾಗೂ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರನ್ನು ಘೋಷಣೆ ಬಾಕಿ ಇದೆ. ಎರಡೂವರೆ ವರ್ಷಗಳ ಹಿಂದೆಯೇ ರಾಜ್ಯ ಸರ್ಕಾರ ನಾಲ್ಕು ವಿಮಾನ ನಿಲ್ದಾಣಗಳ ಹೆಸರು ಶಿಫಾರಸು ಮಾಡಿದೆ.

ಕೇಂದ್ರ ಸರ್ಕಾರದಿಂದ ಘೋಷಣೆ ಬಾಕಿ ಇದೆ ಎಂದು ಟ್ರಸ್ಟ್‌ ಮನವಿಯಲ್ಲಿ ತಿಳಿಸಲಾಗಿದೆ. ಟ್ರಸ್ಟ್‌ನ ಮುಖಂಡರಾದ ಮೇಘರಾಜ್, ಕಲ್ಲೂರು ಶಂಕ್ರಾನಾಯ್ಕ, ಅಲೀಂಖಾನ್, ಬಸವರಾಜ್, ಕೆ.ಆರ್. ಶಿವಣ್ಣ, ಭ್ರಮೇಶ್ವರ್ ಯುವರಾಜ್ ಇದ್ದರು.

ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : January 23, 2026 at 6:40 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಜನವರಿ 23, 2026

Leave a Comment