ಮಾಚೇನಹಳ್ಳಿಯಲ್ಲಿ ಒನ್‌ ವೇ ಸಂಚಾರಕ್ಕೆ ಜಿಲ್ಲಾಧಿಕಾರಿ ಆದೇಶ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಮಾಚೇನಹಳ್ಳಿಯ ಶಿಮುಲ್ ಡೇರಿ ಎದುರು ಬಿ.ಹೆಚ್.ರಸ್ತೆಯ ಚತುಷ್ಪಥ ಕಾಮಗಾರಿಯ ವೇಳೆ ಭೂಕುಸಿತದಿಂದ ಸರ್ವಿಸ್ ರಸ್ತೆಗೆ ಹಾನಿಯಾಗಿದೆ. ಅಲ್ಲಿ ವಾಹನ ಸಂಚಾರದ ಒತ್ತಡ ತಡೆಯಲು ಅಲ್ಲಿ ಏಕಮುಖ ಸಂಚಾರಕ್ಕೆ ಜಿಲ್ಲಾಡಳಿತ ಆದೇಶಿಸಿದೆ. (heavy vehicle)

ಇದನ್ನು ಓದಿ – ಗೋಬಿ ತಿಂದು ವಾಪಸ್‌ ತೆರಳುವಾಗ ಗೊಂದಿಚಟ್ನಹಳ್ಳಿ ಬಳಿ ದುರ್ಘಟನೆ, ಯುವಕ ಸಾವು, ಆಗಿದ್ದೇನು?

ಶಿಮುಲ್ ಡೇರಿ ಎದುರು ಚತುಷ್ಪಥ ರಸ್ತೆ ಕಾಮಗಾರಿ ವೇಳೆ ಆಗಿರುವ ಭೂ ಕುಸಿತವಾಗಿದೆ. ಜಿಲ್ಲಾ ರಕ್ಷಣಾಧಿಕಾರಿ ಬಿ.ನಿಖಿಲ್‌ ಅವರೊಂದಿಗೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸ್ಥಳಕ್ಕೆ ಭೇಟಿ ನೀಡಿ ತಪಾಸಣೆ ನಡೆಸಿದ್ದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಚರ್ಚಿಸಿ ಎಸ್ಪಿ ನೀಡಿದ ವರದಿ ಆಧರಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಈ ಆದೇಶ ಮಾಡಿದ್ದಾರೆ.

ಭಾರಿ ವಾಹನ ಸಂಚಾರ ನಿಷೇಧ

ಶಿಮುಲ್ ಡೇರಿ ಎದುರಿನ ಸರ್ವಿಸ್ ರಸ್ತೆಯಲ್ಲಿ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿಷೇಧ ವಿಧಿಸಿದ್ದು, ಶಿವಮೊಗ್ಗ, ಭದ್ರಾವತಿ, ಬೆಂಗಳೂರಿಗೆ ತೆರಳುವ ಮತ್ತು ಭದ್ರಾವತಿಯಿಂದ ಶಿವಮೊಗ್ಗಕ್ಕೆ ಬರುವ ಲಘು ವಾಹನಗಳಿಗೆ ಮಾತ್ರ ಸದರಿ ಸರ್ವಿಸ್ ರಸ್ತೆ ಬಳಸಲು ಅವಕಾಶ ನೀಡಲಾಗಿದೆ.

Dc-Visit-machenahalli-in-Shimoga

ಭದ್ರಾವತಿಯಿಂದ ಶಿವಮೊಗ್ಗಕ್ಕೆ ಬರುವ ಭಾರಿ ವಾಹನಗಳು ಭದ್ರಾವತಿಯ ಐಬಿ ವೃತ್ತದಿಂದ (ಮಿಲ್ಟಿ ಕ್ಯಾಂಪ್), ಹಿರಿಯೂರು, ಹುಣಸೆಕಟ್ಟೆ ಜಂಕ್ಷನ್, ಲಕ್ಕಿನಕೊಪ್ಪ ಜಂಕ್ಷನ್, ಶಿವಮೊಗ್ಗ ವಿಮಾನ ನಿಲ್ದಾಣ ಮಾರ್ಗದ ಮೂಲಕ ಎಂಆರ್‌ಎಸ್ ವೃತ್ತಕ್ಕೆ ಬರಲಿವೆ.

ಶಿವಮೊಗ್ಗದಿಂದ ಭದ್ರಾವತಿಗೆ ಹೋಗುವ ಭಾರಿ ಗಾತ್ರದ ವಾಹನಗಳು ಎಂಆರ್‌ಎಸ್ ವೃತ್ತ, ಶಿವಮೊಗ್ಗ ವಿಮಾನ ನಿಲ್ದಾಣ, ಲಕ್ಕಿನಕೊಪ್ಪ ಜಂಕ್ಷನ್, ಹುಣಸೆಕಟ್ಟೆ ಜಂಕ್ಷನ್, ಹಿರಿಯೂರು, ಭದ್ರಾವತಿ ಐಬಿ ವೃತ್ತದಿಂದ ಸಂಚರಿಸಬೇಕಿದೆ. ಭದ್ರಾವತಿಯಿಂದ ಶಿವಮೊಗ್ಗಕ್ಕೆ ಬರುವ ಲಘು ಗಾತ್ರದ ವಾಹನಗಳು ಭದ್ರಾವತಿಯ ಟೈಮ್ಸ್ ಇಂಟರ್‌ನ್ಯಾಶನಲ್ ಶಾಲೆ, ಶಿವರಾಮ ನಗರ, ಮಾಚೇನಹಳ್ಳಿ ಕೈಗಾರಿಕಾ ವಸಾಹತು, ಮಲವಗೊಪ್ಪ ಮೂಲಕ ಎಂಆರ್‌ಎಸ್ ವೃತ್ತ ಮಾರ್ಗದಲ್ಲಿ ಸಂಚರಿಸಬಹುದು ಎಂದು ಜಿಲ್ಲಾಡಳಿತದ ಆದೇಶದಲ್ಲಿ ತಿಳಿಸಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 27, 2026

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

Leave a Comment