ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ವಿದ್ಯಾನಗರದಲ್ಲಿರುವ ಆಹಾರ ಪದಾರ್ಥಗಳ ದಾಸ್ತಾನು ಗೋಡೌನ್ (food godown) ಮೇಲೆ ಅಧಿಕಾರಿಗಳ ತಂಡ ದಿಢೀರ್ ದಾಳಿ ನಡೆಸಿದೆ. ಈ ವೇಳೆ ಅವಧಿ ಮೀರಿದ ಭಾರಿ ಪ್ರಮಾಣದ ತಿಂಡಿ ತಿನಿಸು ಪತ್ತೆಯಾಗಿವೆ.
ಇದನ್ನೂ ಓದಿ – ಶಿವಮೊಗ್ಗದ ಫಲಪುಷ್ಪ ಪ್ರದರ್ಶನಕ್ಕೆ ಲಕ್ಷ ಲಕ್ಷ ಜನ, ಮೈಸೂರು ಸಿಲ್ಕ್ ಸೀರೆ ದಾಖಲೆ ಮಾರಾಟ
ಅಪರ ಜಿಲ್ಲಾಧಿಕಾರಿ ಅಭಿಷೇಕ್, ಉಪ ವಿಭಾಗಾಧಿಕಾರಿ ಸತ್ಯನಾರಾಯಣ ಅವರ ನೇತೃತ್ವದಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳ ತಂಡ ಈ ಕಾರ್ಯಾಚರಣೆ ನಡೆಸಿದೆ. ಶಿವಮೊಗ್ಗದಲ್ಲಿ ಮಾರಾಟ ಮಾಡಲು ಬೆಂಗಳೂರಿನಿಂದ ತಂದಿದ್ದ ವಿವಿಧ ಆಹಾರ ಪದಾರ್ಥಗಳನ್ನು ಈ ಗೋಡೌನ್ನಲ್ಲಿ ದಾಸ್ತಾನು ಮಾಡಲಾಗಿತ್ತು ಎಂದು ತಿಳಿದು ಬಂದಿದೆ.

ಈ ಗೋಡೌನ್ನಲ್ಲಿ ಅವಧಿ ಮುಗಿದಿದ್ದರೂ ರಾಶಿ ರಾಶಿ ತಿಂಡಿ ಪ್ಯಾಕೆಟ್ಗಳನ್ನು ಸಂಗ್ರಹಿಸಿಡಲಾಗಿತ್ತು. ಇದನ್ನು ಕಂಡು ಅಧಿಕಾರಿಗಳ ತಂಡವೇ ಬೆಸ್ತು ಬಿದ್ದಿದೆ. ಮಹಾನಗರ ಪಾಲಿಕೆ ಸಿಬ್ಬಂದಿ ಎಲ್ಲಾ ಅವಧಿ ಮೀರಿದ ಆಹಾರ ಪದಾರ್ಥಗಳನ್ನು ವಶಕ್ಕೆ ಪಡೆದು ನಾಶಪಡಿಸಿದರು. ಗೋಡೌನ್ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಿ ನೋಟಿಸ್ ಜಾರಿಗೊಳಿಸಲಾಗಿದೆ.

LATEST NEWS
- ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

- ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

- ಉಷಾ ನರ್ಸಿಂಗ್ ಹೋಂ ಬಳಿ ಅಂಬ್ಯುಲೆನ್ಸ್ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

- ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು














