ಶಂಕರಘಟ್ಟ: ಕಳೆದ ವಾರಾಂತ್ಯದಲ್ಲಿ ಮುಕ್ತಾಯಗೊಂಡ ಬಿಆರ್ಪಿ ಲೆಜೆಂಡ್ಸ್ ಆಶ್ರಯದಲ್ಲಿ ನಡೆದ ಮೂರು ದಿನಗಳ 40 ವರ್ಷ ಮೇಲ್ಪಟ್ಟವರ ಕ್ರಿಕೆಟ್ (Cricket) ಪಂದ್ಯಾವಳಿಯು 80-90ರ ದಶಕದ ಹಳೆಯ ಸ್ನೇಹಿತರ ಭಾವನಾತ್ಮಕ ಸಮ್ಮಿಲನಕ್ಕೆ ಸಾಕ್ಷಿಯಾಯಿತು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ರಾಜ್ಯದ ನಾನಾ ಭಾಗಗಳಲ್ಲಿ ನೆಲೆಸಿರುವ ಅಂದಿನ ಚಿಣ್ಣರು, ಹುಡುಗಾಟಿಕೆಯ ದಿನಗಳನ್ನು ಮೆಲುಕು ಹಾಕುತ್ತಾ ಕ್ರಿಕೆಟ್ ಆಡುವ ಮೂಲಕ ತಮ್ಮಲ್ಲಿ ಇನ್ನೂ ಕ್ರೀಡಾ ಸ್ಫೂರ್ತಿ ಮತ್ತು ಚೈತನ್ಯದ ಚಿಲುಮೆ ಹಸಿರಾಗಿರುವುದನ್ನು ಸಾಬೀತುಪಡಿಸಿದರು. ಕಳೆದ 4 ವರ್ಷದಿಂದ ಈ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗುತ್ತಿದೆ.

ಕುವೆಂಪು ವಿಶ್ವವಿದ್ಯಾಲಯದ ಡಾ. ಧರಣಿಕುಮಾರ್, ಸಿದ್ದರಾಮ, ಗಣೇಶ್, ಬಸವರಾಜು (ಬಬ್ಲೂ), ಮತ್ತು ಸ್ಥಳೀಯರಾದ ಬಿ. ಟಿ. ಮಂಜು, ಪ್ರಭಾಕರ್, ಅಜೀ಼ಜ಼್, ಗಿರೀಶ್, ಮಹೇಶ್, ಗುರು, ಸೇರಿದಂತೆ 200ಕ್ಕೂ ಹೆಚ್ಚು ಮಂದಿ ಸ್ನೇಹಿತರ ಬಳಗ ನೆರೆದಿತ್ತು.
ಇದನ್ನೂ ಓದಿ – ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





