ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ತಾಲೂಕಿನ ಶ್ರೀರಾಂಪುರ ಗ್ರಾಮದ ಅಡಿಕೆ ತೋಟವೊಂದರಲ್ಲಿ ಅಡಿಕೆ ಮರಗಳಿಗೆ ಔಷಧಿ (pesticide) ಸಿಂಪಡಣೆ ಮಾಡುವ ಕೆಲಸ ಮಾಡುತ್ತಿದ್ದ ಕಾರ್ಮಿಕನೋರ್ವ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ. ತೋಟದ ಮಾಲೀಕನ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಮಂಜಾನಾಯ್ಕ ಎಂಬ ಕಾರ್ಮಿಕ ಶ್ರೀರಾಂಪುರದ ಏಕಾಂತಪ್ಪ ಎಂಬುವವರ ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಕೆಲಸಕ್ಕೆ ಹೋಗಿದ್ದರು. ಕೆಲಸ ಮುಗಿಸಿ ಮನೆಗೆ ಮರಳಿದಾಗ ತೀವ್ರ ಕೆಮ್ಮು, ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಕೂಡಲೆ ಮಂಜಾನಾಯ್ಕ ಅವರನ್ನು ಗಾಡಿಕೊಪ್ಪದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿತ್ತು. ಮನೆಗೆ ಮರಳಿದ ನಂತರ ರಕ್ತವಾಂತಿ ಮಾಡಿಕೊಂಡು ಅಸ್ವಸ್ಥಗೊಂಡಿದ್ದಾರೆ. ತಕ್ಷಣ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ – ತಾಳಗುಪ್ಪದವರೆಗೆ ರೈಲು ವಿಸ್ತರಣೆ, ಸಂಸದರ ಮನವಿಗೆ ಮಿನಿಸ್ಟರ್ ಒಪ್ಪಿಗೆ, ಯಾವ ರೈಲು? ಯಾಕೆ?
ಅಡಿಕೆ ತೋಟಕ್ಕೆ ಔಷಧಿ ಸಿಂಪಡಣೆ ಮಾಡುವ ಸಮಯದಲ್ಲಿ ತೋಟದ ಮಾಲೀಕರು ಯಾವುದೇ ಮುಂಜಾಗ್ರತಾ ಕ್ರಮ ಅನುಸರಿಸಿಲ್ಲ. ಕಾರ್ಮಿಕನಿಗೆ ಸುರಕ್ಷತಾ ಸಾಧನಗಳನ್ನು ನೀಡಿಲ್ಲ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LATEST NEWS
- ಶಿವಮೊಗ್ಗದಲ್ಲಿ ₹18,000 ಸಂಬಳದ ಕೆಲಸ ಖಾಲಿ ಇದೆ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

- ಶಿವಾಜಿ ಜಯಂತಿ ಮೆರವಣಿಗೆ ಮೇಲೆ ಕಲ್ಲು ತೂರಾಟ, ಶಿಕಾರಿಪುರದಲ್ಲಿ ವಿಜಯೇಂದ್ರ ಆಕ್ರೋಶ, ಏನಂದ್ರು?

- ಶಿಕಾರಿಪುರದಲ್ಲಿ ವಕೀಲ ನೇಣಿಗೆ ಶರಣು, ಕಾರಣವೇನು?

- ಸಾಗರದಲ್ಲಿ ಲೋಕಾಯುಕ್ತರಿಂದ ಕುಂದುಕೊರತೆ ಸಭೆ, ಎಲ್ಲಿ? ಯಾವಾಗ?

- ಸಾಗರ ಮಾರಿಕಾಂಬಾ ದೇವಿ ಮೆರವಣಿಗೆ ನೋಡಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಆಘಾತ

About The Editor
ನಿತಿನ್ ಆರ್.ಕೈದೊಟ್ಲು






