ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಗರಕ್ಕೆ ಆಗಮಿಸಿದ್ದರೆ. ಅವರ ಹೆಲಿಕಾಪ್ಟರ್ ಲ್ಯಾಂಡ್ ಆಗುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ‘ಮುಂದಿನ ಸಿಎಂ ಡಿಕೆಶಿ‘ (Next CM DKS) ಎಂಬ ಘೋಷಣೆಗಳನ್ನು ಕೂಗಿದರು. ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು, ಮುಖಂಡರು ಸುತ್ತವರಿಸಿದ್ದರಿಂದ ಅವರನ್ನು ನಿರ್ವಹಿಸಲು ಪೊಲೀಸರು ಹೆಣಗಾಡಿದರು.
ಮನರೇಗಾ ಜಾಹೀರಾತು, ತಪ್ಪೇನಿದೆ?
ಜನರಿಗೆ ಮನವರಿಕೆ ಮಾಡುವ ಉದ್ದೇಶದಿಂದ ಜಾಹೀರಾತು ನೀಡಲಾಗಿದೆ. ಅದನ್ನು ನಮ್ಮ ಶೈಲಿಯಲ್ಲಿ ತಿಳಿಸಲು ಯತ್ನಿಸಿದ್ದೇವೆ. ಅದರಲ್ಲಿ ತಪ್ಪೇನಿದೆ?’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು.

ಮನರೇಗಾ ಸಾಕಷ್ಟು ಅನುಕೂಲ ಮಾಡಿಕೊಟ್ಟಿದೆ. ಆದರೆ ಕೇಂದ್ರ ಸರಕಾರ ಗಾಂಧೀಜಿ ಅವರ ಹೆಸರು ಬದಲಿಸಿದರು. ಈ ಯೋಜನೆಗೆ ಕೇಂದ್ರದಿಂದ ಅನುದಾನ ನೀಡಬೇಕೇ ವಿನಾ ರಾಜ್ಯ ನೀಡಲು ಬರುವುದಿಲ್ಲ. ಬಡ ಜನರ ಬದುಕು ಸುಸ್ಥಿರಗೊಳಿಸುವ ಯೋಜನೆಯ ಹೆಸರು ಮಾತ್ರವಲ್ಲ, ಅದರ ಮೇಲೆ ಪಂಚಾಯಿತಿಗಳಿಗೆ ಇದ್ದ ಹಿಡಿತವನ್ನೂ ತಪ್ಪಿಸಲಾಗಿದೆ. ಈ ಕುರಿತು ಕೇಳಿದ್ದಕ್ಕೆ ಮಾರ್ಗಸೂಚಿ ನೀಡಿದೆ. ಆದರೆ, ಅದರಲ್ಲಿ ಜೀವವೇ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ – ಹಾರನ್ ವಿಚಾರವಾಗಿ ಕಿರಿಕ್, ವ್ಯಕ್ತಿ ಮೇಲೆ ಹಲ್ಲೆ, ದವಡೆ ಹಲ್ಲು ಕಟ್, ಆಗಿದ್ದೇನು?
ಯತೀಂದ್ರ ಹಸ್ತಕ್ಷೇಪ ಎನ್ನಲಾಗದು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರ ಹಸ್ತಕ್ಷೇಪದಿಂದಾಗಿ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ರಾಜೀನಾಮೆ ಪತ್ರದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿ.ಕೆ.ಶಿ, ಜಾರ್ಜ್ ಹಿರಿಯರು, ಸ್ವಾಭಿಮಾನದಿಂದ ಕೆಲಸ ಮಾಡುವವರು. ಪ್ರತಿಪಕ್ಷದವರ ಕೆಲಸವೇ ಆರೋಪಿಸುವುದು. ಕೆಲವೊಮ್ಮೆ ಪಕ್ಷದ ಕಾರ್ಯಕರ್ತರು ಕೇಳಿಕೊಂಡಾಗ ಯತೀಂದ್ರ ಅವರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಿರಬಹುದು. ಅದನ್ನು ಹಸ್ತಕ್ಷೇಪ ಎನ್ನಲಾಗದು ಎಂದರು.

LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು















