ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ: ಎಟಿಎಂ ಕೇಂದ್ರದಲ್ಲಿ ಹಣ ಡ್ರಾ ಮಾಡಲು ಬಂದಿದ್ದ ವೃದ್ಧರೊಬ್ಬರ ಕಾರ್ಡ್ ಬದಲಿಸಿ (cheated), ಅವರ ಖಾತೆಯಿಂದ ಒಂದು ಲಕ್ಷ ಹಣ ದೋಚಿರುವ ಘಟನೆ ಭದ್ರಾವತಿಯ KSRTC ಬಸ್ ನಿಲ್ದಾಣದ ಮುಂಭಾಗದ ಎಟಿಎಂನಲ್ಲಿ ಜರುಗಿದೆ. ಜನವರಿ 12ರಂದು ಕೃತ್ಯ ನಡೆದಿದ್ದು ತಡವಾಗಿ ದೂರು ದಾಖಲಾಗಿದೆ.
ಸಿದ್ಧಾರೂಢನಗರದ ಸದಾಶಿವಪ್ಪ ಜಿ.ಕೆ ಅವರು ಹಣ ಡ್ರಾ ಮಾಡಲು ಕೆನರಾ ಬ್ಯಾಂಕ್ ಎಟಿಎಂಗೆ ತೆರಳಿದ್ದರು. ಈ ವೇಳೆ ಎಟಿಎಂನಿಂದ ಹಣ ಬಾರದೇ ಇದ್ದಾಗ, ಅಲ್ಲೇ ಇದ್ದ ಸುಮಾರು 25-30 ವರ್ಷದ ಅಪರಿಚಿತ ವ್ಯಕ್ತಿಯ ಸಹಾಯ ಕೇಳಿದ್ದಾರೆ. ಆ ವ್ಯಕ್ತಿಯು ಸದಾಶಿವಪ್ಪ ಅವರ ಎಟಿಎಂ ಕಾರ್ಡ್ ಪಡೆದು, ಪಾಸ್ವರ್ಡ್ ಗಮನಿಸಿ ಬಳಿಕ ಕಾರ್ಡ್ ಬದಲಿಸಿ ಬೇರೆ ಕಾರ್ಡ್ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.

ಎಟಿಎಂ ಕಾರ್ಡ್ ಬದಲಾಗಿರುವುದನ್ನು ಅರಿಯದ ಸದಾಶಿವಪ್ಪ ಅವರು ಮನೆಗೆ ಹೋಗಿದ್ದಾರೆ. ಬಳಿಕ ಬ್ಯಾಂಕ್ನಲ್ಲಿ ಪರಿಶೀಲಿಸಿದಾಗ ಅವರ ಖಾತೆಯಿಂದ ಹಂತ ಹಂತವಾಗಿ ಒಟ್ಟು ₹1,18,700 ಹಣ ಡ್ರಾ ಮಾಡಿಕೊಂಡಿರುವುದು ಗೊತ್ತಾಗಿದೆ. ವಂಚನೆ ಸಂಬಂಧ ಸದಾಶಿವಪ್ಪ ಅವರು ನೀಡಿದ ದೂರಿನ ಮೇರೆಗೆ ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಗುಡ್ಡೇಕಲ್ನಲ್ಲಿ ತೈಪೂಸಂ ಜಾತ್ರೆ, ಹಾಲಿನ ಕುಂಭ ಹೊತ್ತು ಮಹಿಳೆಯರ ಮೆರವಣಿಗೆ, ಜಾತ್ರೆಯ ವಿಶೇಷವೇನು?
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು
















