ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದ ಆವರಣಕ್ಕೆ ಹೊರಗಿನಿಂದ ನಿಷೇಧಿತ ವಸ್ತುಗಳನ್ನು ಎಸೆದಿರುವ (packet) ಘಟನೆ ಬೆಳಕಿಗೆ ಬಂದಿದೆ. ಕಾರಾಗೃಹದ ಭದ್ರತಾ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಈ ವಸ್ತುಗಳು ಪತ್ತೆಯಾಗಿದ್ದು, ಜೈಲು ಅಧಿಕಾರಿಗಳು ಪೊಲೀಸ್ ದೂರು ದಾಖಲಿಸಿದ್ದಾರೆ.
ಜನವರಿ 30ರ ರಾತ್ರಿ ಕೇಂದ್ರ ಕಾರಾಗೃಹದ ಭದ್ರಾ ಸೆಕ್ಷನ್ ಆವರಣದಲ್ಲಿ ಜೈಲು ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಕಾರಾಗೃಹದ ಹೊರಗಿನಿಂದ ಪ್ಲಾಸ್ಟಿಕ್ ಕವರ್ನಲ್ಲಿ ಸುತ್ತಿದ ಪೊಟ್ಟಣಗಳನ್ನು ಜೈಲಿನ ಆವರಣದೊಳಗೆ ತೂರಿ ಬಂದಿವೆ. ತಕ್ಷಣ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ನಿಷೇಧಿತ ವಸ್ತುಗಳು ಪತ್ತೆಯಾಗಿವೆ.

ಪೊಟ್ಟಣಗಳಲ್ಲಿ ಒಂದು ಸಣ್ಣ ಕೀಪ್ಯಾಡ್ ಮೊಬೈಲ್ ಫೋನ್, ಅಂದಾಜು 22 ಗ್ರಾಂ ತೂಕದ ಗಾಂಜಾ, 4 ಸಿಗರೇಟ್ ಪ್ಯಾಕೆಟ್ ಮತ್ತು ಒಂದು ಕಪ್ಪು ಬಣ್ಣದ ಚಾರ್ಜಿಂಗ್ ಕೇಬಲ್ ಇದ್ದವು. ಕಾರಾಗೃಹದೊಳಗೆ ನಿಷೇಧಿತ ವಸ್ತು ಎಸೆದವರ ವಿರುದ್ಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ‘ಕುಡುಕರ ರಾಜ್ಯ ಮಾಡಿ ದಕ್ಷಿಣ ಭಾರತದ ನಾಯಕನಾಗಲು ಹೊರಟಿದ್ದಾರೆ ಸಿದ್ದರಾಮಯ್ಯ’, ವಿಜಯೇಂದ್ರ ಗರಂ
LATEST NEWS
- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

- ಗಾಂಧಿ ಬಜಾರ್ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್, ಏನಿದು ಕೇಸ್?

- ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

- ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್

- ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

About The Editor
ನಿತಿನ್ ಆರ್.ಕೈದೊಟ್ಲು















