ತೀರ್ಥಹಳ್ಳಿ: ತಾಲೂಕಿನ ಲಿಂಗಾಪುರ ಗ್ರಾಮದ ರೈತರೊಬ್ಬರ ಅಡಿಕೆ ತೋಟಕ್ಕೆ ನೀರು ಹಾಯಿಸಲು ಅಳವಡಿಸಿದ್ದ ವಿದ್ಯುತ್ ಮೋಟಾರ್ನ (Pump) ಕೇಬಲ್ ವೈರ್ ಕಳ್ಳತನ ಮಾಡಲಾಗಿದೆ. ಸುಮಾರು 120 ಮೀಟರ್ ಉದ್ದದ ಕೇಬಲ್ ಕಳುವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಲಿಂಗಾಪುರ ಗ್ರಾಮದ ಎನ್. ವೆಂಕಟೇಶ್ ಎಂಬುವವರು ತಮ್ಮ 10 ಎಕರೆ ಅಡಿಕೆ ತೋಟಕ್ಕೆ ನೀರು ಹಾಯಿಸಲು ಮುಡುಬ ಸ್ಮಶಾನದ ಬಳಿ ಹೊಳೆಗೆ ಮೋಟಾರ್ ಅಳವಡಿಸಿದ್ದರು. ಮೋಟಾರ್ ಆಫ್ ಮಾಡಿ ಹೋಗಿದ್ದ ಅವರು ಮರುದಿನ ಸಂಜೆ ಮೋಟಾರ್ ಆನ್ ಮಾಡಲು ಹೋದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

ವಿದ್ಯುತ್ ಕಂಬದಿಂದ ಪ್ಯಾನಲ್ ಬೋರ್ಡ್ಗೆ ಸಂಪರ್ಕ ಕಲ್ಪಿಸಿದ್ದ ವೈರ್ ಕತ್ತರಿಸಲಾಗಿದೆ. ಇದರ ಮೌಲ್ಯ ಅಂದಾಜು ₹18,000 ಎಂದು ಅಂದಾಜಿಸಲಾಗಿದೆ. ಘಟನೆ ಸಂಬಂಧ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಇದನ್ನೂ ಓದಿ – ಒಂದೇ ಒಂದು ಈ ಮೇಲ್ನಿಂದ ಶಿವಮೊಗ್ಗದ ಕಾರ್ಖಾನೆಗೆ ₹8,89,950 ನಷ್ಟ, ಆಗಿದ್ದೇನು?

LATEST NEWS
- ಉಪನ್ಯಾಸಕಿಗೆ ವಿಡಿಯೋ ಕರೆ ಮಾಡಿ ಅಶ್ಲೀಲ ವರ್ತನೆ, ದಾಖಲಾಯ್ತು ಕೇಸ್, ಏನಿದು ಪ್ರಕರಣ?

- ಕಪ್ಪು ಪ್ಯಾಕೆಟ್ ಕೇಸ್, ಮೂವರು ಅರೆಸ್ಟ್, ಏನಿದು ಪ್ರಕರಣ? ಯಾರಿವರು ಬಂಧಿತರು?

- ಅರ್ಜಿಗಳನ್ನು ಪೂರ್ತಿಗೊಳಿಸಲು ಫೆಬ್ರವರಿ 12ರವರೆಗೆ ಅವಕಾಶ, ಇಲ್ಲಿದೆ ಕಂಪ್ಲೀಟ್ ಮಾಹಿತಿ

- ಸೋಗಾನೆಯಲ್ಲಿ ಧಗಧಗ ಹೊತ್ತಿ ಉರಿದ ತೊಗರಿ, ಹುರುಳಿಯ ಬೊಣವೆ, ಆಗಿದ್ದೇನು?

- ಕಾರು, ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಗೆ ನೆರವಾದ ಶಿವಮೊಗ್ಗ ಜಿಲ್ಲಾಧಿಕಾರಿ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





