ಕರೆಂಟ್‌ ಇದ್ದರು ಅಡಿಕೆ ತೋಟದ ಮೋಟರ್‌ ಆನ್‌ ಆಗಲಿಲ್ಲ, ಪರಿಶೀಲಿಸಿದ ರೈತನಿಗೆ ಕಾದಿತ್ತು ಆಘಾತ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ತೀರ್ಥಹಳ್ಳಿ: ತಾಲೂಕಿನ ಲಿಂಗಾಪುರ ಗ್ರಾಮದ ರೈತರೊಬ್ಬರ ಅಡಿಕೆ ತೋಟಕ್ಕೆ ನೀರು ಹಾಯಿಸಲು ಅಳವಡಿಸಿದ್ದ ವಿದ್ಯುತ್ ಮೋಟಾರ್‌ನ (Pump) ಕೇಬಲ್ ವೈರ್‌ ಕಳ್ಳತನ ಮಾಡಲಾಗಿದೆ. ಸುಮಾರು 120 ಮೀಟರ್ ಉದ್ದದ ಕೇಬಲ್ ಕಳುವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಲಿಂಗಾಪುರ ಗ್ರಾಮದ ಎನ್. ವೆಂಕಟೇಶ್ ಎಂಬುವವರು ತಮ್ಮ 10 ಎಕರೆ ಅಡಿಕೆ ತೋಟಕ್ಕೆ ನೀರು ಹಾಯಿಸಲು ಮುಡುಬ ಸ್ಮಶಾನದ ಬಳಿ ಹೊಳೆಗೆ ಮೋಟಾರ್ ಅಳವಡಿಸಿದ್ದರು. ಮೋಟಾರ್ ಆಫ್ ಮಾಡಿ ಹೋಗಿದ್ದ ಅವರು ಮರುದಿನ ಸಂಜೆ ಮೋಟಾರ್ ಆನ್ ಮಾಡಲು ಹೋದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

Maluru-Police-Station-in-Thirthahalli-taluk.webp

ವಿದ್ಯುತ್ ಕಂಬದಿಂದ ಪ್ಯಾನಲ್ ಬೋರ್ಡ್‌ಗೆ ಸಂಪರ್ಕ ಕಲ್ಪಿಸಿದ್ದ ವೈರ್‌ ಕತ್ತರಿಸಲಾಗಿದೆ. ಇದರ ಮೌಲ್ಯ ಅಂದಾಜು ₹18,000 ಎಂದು ಅಂದಾಜಿಸಲಾಗಿದೆ. ಘಟನೆ ಸಂಬಂಧ ಮಾಳೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Maluru-Police-Station-in-Thirthahalli-taluk.webp

ಇದನ್ನೂ ಓದಿ – ಒಂದೇ ಒಂದು ಈ ಮೇಲ್‌ನಿಂದ ಶಿವಮೊಗ್ಗದ ಕಾರ್ಖಾನೆಗೆ ₹8,89,950 ನಷ್ಟ, ಆಗಿದ್ದೇನು?

JNNCE-COLLEGE-ADVT.

Leave a Comment