ಶಿವಮೊಗ್ಗ: ನಗರದ ಸೋಗಾನೆ ಕೇಂದ್ರ ಕಾರಾಗೃಹದ ಆವರಣದೊಳಗೆ ಮೊಬೈಲ್ ಮತ್ತು ಮಾದಕ ವಸ್ತುಗಳನ್ನು ಎಸೆದಿದ್ದ ಮೂವರು ಆರೋಪಿಗಳನ್ನು (gang) ತುಂಗಾನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಜೈಲಿನ ಗೋಡೆಯ ಹೊರಗಿನಿಂದ ನಿಷೇಧಿತ ವಸ್ತುಗಳನ್ನು ಒಳಕ್ಕೆ ಎಸೆಯುತ್ತಿದ್ದ ಜಾಲವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಜನವರಿ 30ರಂದು ಅಪರಿಚಿತ ವ್ಯಕ್ತಿಗಳು ಕೇಂದ್ರ ಕಾರಾಗೃಹದ ಒಳಗೆ ಕಪ್ಪು ಬಣ್ಣದ ಗಮ್ ಟೇಪ್ನಿಂದ ಪ್ಯಾಕೆಟ್ ಎಸೆದಿದ್ದರು. ಅದರ ಒಳಗೆ ಮೊಬೈಲ್ ಫೋನ್ಗಳು, ಸಿಗರೇಟ್ ಹಾಗೂ ಬೀಡಿಗಳ ಕಂತೆಗಳನ್ನು ಇದ್ದವು. ಈ ಬಗ್ಗೆ ಕಾರಾಗೃಹದ ಮುಖ್ಯ ಅಧೀಕ್ಷಕ ಡಾ. ರಂಗನಾಥ್ ಅವರು ನೀಡಿದ ದೂರಿನ ಮೇರೆಗೆ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ – ಸೋಗಾನೆಯಲ್ಲಿ ಧಗಧಗ ಹೊತ್ತಿ ಉರಿದ ತೊಗರಿ, ಹುರುಳಿಯ ಬೊಣವೆ, ಆಗಿದ್ದೇನು?
ಪ್ಯಾಕೆಟ್ ಎಸೆದಿದ್ದ ಟಿಪ್ಪುನಗರ ನಿವಾಸಿ ಇಮ್ರಾನ್ ಪಾಷಾ ಅಲಿಯಾಸ್ ಇಮ್ಮು (25), ಸೈಯ್ಯದ್ ಮಲ್ಲಿಕ್ ಅಲಿಯಾಸ್ ತಬ್ರೇಜ್ (22), ಅಂಬೇಡ್ಕರ್ ನಗರ ನಿವಾಸಿ ಅಲ್ಲಾ ಬಕಶ್ ಅಲಿಯಾಸ್ ಪೊಟ್ಯಾಟೋ (20) ಎಂಬುವವರನ್ನು ಬಂಧಿಸಲಾಗಿದೆ.

ತುಂಗಾನಗರ ಇನ್ಸ್ಪೆಕ್ಟರ್ ಕೆ.ಟಿ. ಗುರುರಾಜ್ ನೇತೃತ್ವದ ತಂಡ ಮೂವರನ್ನು ಬಂಧಿಸಿದೆ. ಆರೋಪಿಗಳಿಂದ ಮೊಬೈಲ್ ಫೋನ್ ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪಿಎಸ್ಐ ಗಾದಿಲಿಂಗಗೌಡರ್, ರಘುವೀರ್, ಅಪರಾಧ ವಿಭಾಗದ ಸಿಬ್ಬಂದಿ ಅರುಣ್, ಕಿರಣ್, ರಂಗನಾಥ್, ತಮ್ಮಣ್ಣ ಜಂಬಗಿ ಕಾರ್ಯಾಚರಣೆಯಲ್ಲಿ ಇದ್ದರು.

LATEST NEWS
- ಉಪನ್ಯಾಸಕಿಗೆ ವಿಡಿಯೋ ಕರೆ ಮಾಡಿ ಅಶ್ಲೀಲ ವರ್ತನೆ, ದಾಖಲಾಯ್ತು ಕೇಸ್, ಏನಿದು ಪ್ರಕರಣ?

- ಕಪ್ಪು ಪ್ಯಾಕೆಟ್ ಕೇಸ್, ಮೂವರು ಅರೆಸ್ಟ್, ಏನಿದು ಪ್ರಕರಣ? ಯಾರಿವರು ಬಂಧಿತರು?

- ಅರ್ಜಿಗಳನ್ನು ಪೂರ್ತಿಗೊಳಿಸಲು ಫೆಬ್ರವರಿ 12ರವರೆಗೆ ಅವಕಾಶ, ಇಲ್ಲಿದೆ ಕಂಪ್ಲೀಟ್ ಮಾಹಿತಿ

- ಸೋಗಾನೆಯಲ್ಲಿ ಧಗಧಗ ಹೊತ್ತಿ ಉರಿದ ತೊಗರಿ, ಹುರುಳಿಯ ಬೊಣವೆ, ಆಗಿದ್ದೇನು?

- ಕಾರು, ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಗೆ ನೆರವಾದ ಶಿವಮೊಗ್ಗ ಜಿಲ್ಲಾಧಿಕಾರಿ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





