ಚಲಿಸುತ್ತಿದ್ದಾಗ ಚಕ್ರ ಕಟ್‌ ಆಗಿ ತೋಟಕ್ಕೆ ನುಗ್ಗಿದ ಖಾಸಗಿ ಬಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿಕಾರಿಪುರ: ತಾಲೂಕಿನ ಶಿರಾಳಕೊಪ್ಪದ ಶೀರಿಹಳ್ಳಿ ಗ್ರಾಮದ ಬಳಿ ಇಂದು ಬೆಳಗ್ಗೆ ಖಾಸಗಿ ಬಸ್ಸೊಂದರ (private bus) ಹಿಂಬದಿ ವೀಲ್ ಕಟ್ ಆಗಿ ಅಡಕೆ ತೋಟಕ್ಕೆ ನುಗ್ಗಿದೆ. ಬಸ್ಸಿನಲ್ಲಿದ್ದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿ 25ಕ್ಕೂ ಹೆಚ್ಚು ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಿಕ್ಕೇರೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಶೀರಿಹಳ್ಳಿ ಗ್ರಾಮದ ಸಮೀಪ ಚಲಿಸುತ್ತಿದ್ದಾಗ ಹಠಾತ್ತನೆ ಹಿಂಬದಿ ಚಕ್ರದ ಆಕ್ಸಲ್‌ ಸಂಪೂರ್ಣ ಕಟ್‌ ಆಗಿದೆ. ಇದರಿಂದಾಗಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆಯ ಪಕ್ಕದಲ್ಲಿದ್ದ ಅಡಕೆ ತೋಟಕ್ಕೆ ನುಗ್ಗಿದೆ. ವೇಗವಾಗಿ ನುಗ್ಗಿದ ಬಸ್ ತೋಟದಲ್ಲಿದ್ದ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದು ನಿಂತಿದೆ.

Krishna-Bus-lost-backside-tires-at-Shirihalli-in-Shiralakoppa

ಬಸ್ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದ ಕಾರಣ ತೋಟದ ಹಳ್ಳಕ್ಕೆ ಬೀಳುವುದು ತಪ್ಪಿದೆ. ಇದರಿಂದಾಗಿ ಬಸ್ಸಿನಲ್ಲಿದ್ದ 25ಕ್ಕೂ ಹೆಚ್ಚು ಪ್ರಯಾಣಿಕರು ದೊಡ್ಡ ಅನಾಹುತದಿಂದ ಪಾರಾಗಿದ್ದಾರೆ. ಅಪಘಾತದ ರಭಸಕ್ಕೆ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನಾ ಸ್ಥಳಕ್ಕೆ ಶಿರಾಳಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ – ರಾಜ್ಯವನ್ನೇ ಬೆಚ್ಚಿಬೀಳಿಸಿದ ಶಿವಮೊಗ್ಗದ ಡ್ರೈವರ್‌, 19 ಅಕೌಂಟ್, 25 ATM ಕಾರ್ಡ್‌, ₹55 ಕೋಟಿ ನಷ್ಟ, ಏನಿದು ಕೇಸ್?

Shivamogga Live reached 2.8 million views in January-2026 - Editor : Nitin Kaidotlu

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment