ಸಾಗರ: ಶ್ರೀ ಮಾರಿಕಾಂಬ ಜಾತ್ರೆಯು (Marikamba Jatre) ಬುಧವಾರ ಅಮ್ಮನವರನ್ನು ವನಕ್ಕೆ ಬಿಡುವ ಶಾಸ್ತ್ರದ ಮೂಲಕ ಸಂಪನ್ನಗೊಳ್ಳಲಿದೆ. ಇದಕ್ಕಾಗಿ ನ್ಯಾಸ ಪ್ರತಿಷ್ಠಾನ ಪೂರ್ವ ಸಿದ್ಧತೆ ಮಾಡಿಕೊಂಡಿದೆ. ಅಮ್ಮನವರನ್ನು ವನಕ್ಕೆ ಬಿಡುವ ಶಾಸ್ತ್ರದ ಹಿನ್ನೆಲೆ ಒಂದಷ್ಟು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕೆಲವು ಸೂಚನೆಗಳನ್ನು ನೀಡಿದೆ.
ಎಲ್ಲ ರೀತಿಯ ಪಾಸ್ಗಳು ಬುಧವಾರ ಮಧ್ಯಾಹ್ನ 2ರೊಳಗೆ ಮುಕ್ತಾಯಗೊಳ್ಳುತ್ತವೆ. ರಥ ನಿಲ್ಲಿಸುವುದರಿಂದ ಸುತ್ತಮುತ್ತಲಿನ ಬ್ಯಾರಿಕೇಡ್ ತೆರವು ಮಾಡಲಾಗುತ್ತದೆ. ಪೂಜಾ ಸಮಿತಿ, ರಥೋತ್ಸವ ಸಮಿತಿಯವರು ಬಿಟ್ಟರೆ ಯಾರಿಗೂ ಅವಕಾಶ ಇಲ್ಲ ಎಂದು ಡಿವೈಎಸ್ಪಿ ಡಾ. ಬೆನಕ ಪ್ರಸಾದ್ ತಿಳಿಸಿದರು.
ಅಮ್ಮನವರನ್ನು ವನಕ್ಕೆ ಬಿಡಲು ರಥದ ಮೇಲೆ ಪ್ರತಿಷ್ಠಾಪನೆ ಮಾಡಬೇಕಾಗಿರುವ ಹಿನ್ನೆಲೆ ಬುಧವಾರ ಮಧ್ಯಾಹ್ನ 3 ಗಂಟೆ ನಂತರ ವಿಶೇಷ ದರ್ಶನ, ಪೂಜಾ ಪಾಸ್ ಮೂಲಕ ವಿಶೇಷ ಪೂಜೆ ಇನ್ನಿತರೆ ಸೇವೆ ಇರುವುದಿಲ್ಲ. ಒಂದೇ ಕ್ಯೂನಲ್ಲಿ ಬಂದು ಅಮ್ಮನವರ ದರ್ಶನ ಮಾಡಲು ಅವಕಾಶ ಕಲ್ಪಿಸಲಾಗಿದೆ.ಡಾ. ಬೆನಕ ಪ್ರಸಾದ್, ಪೊಲೀಸ್ ಉಪಾಧಿಕ್ಷಕ
ಪ್ರತಿಷ್ಠಾನದ ಅಧ್ಯಕ್ಷ ಕೆ.ಎನ್.ನಾಗೇಂದ್ರ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಬಿ.ಗಿರಿಧರ ರಾವ್, ರಥೋತ್ಸವ ಸಮಿತಿಯ ಕೆ.ಸಿ.ನವೀನ್, ವಿವಿಧ ಸಮಿತಿ ಸಂಚಾಲಕರು ಉಪಸಿತರಿದ್ದರು.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ