ಸಾಗರ ಮಾರಿಕಾಂಬ ಜಾತ್ರೆ ಮುಗಿಸಿ ಬಸ್‌ ಹತ್ತಿದ ಮಹಿಳೆ, ಸ್ವಲ್ಪ ಹೊತ್ತಿಗೆ ಕಾದಿತ್ತು ಶಾಕ್‌, ಆಗಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಸಾಗರ: ನಗರದ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಬಸ್ ಹತ್ತುವ ಸಂದರ್ಭ ಮಹಿಳೆಯೊಬ್ಬರ ಬ್ಯಾಗ್‌ನಿಂದ ಸುಮಾರು 12 ಗ್ರಾಂ ತೂಕದ ಬಂಗಾರದ ಚೈನ್ (gold chain) ಕಳುವಾಗಿರುವ ಘಟನೆ ನಡೆದಿದೆ.

ಸೊರಬ ತಾಲೂಕಿನ ಜಡೆ ಗ್ರಾಮದ ಜಯಮ್ಮ ಎಂಬುವವರು ಸಾಗರದ ಜಂಬಗಾರಿನಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಮಾರಿಕಾಂಬ ಜಾತ್ರೆಗೆ ಬಂದಿದ್ದರು. ಜಾತ್ರೆ ಮುಗಿಸಿ ವಾಪಸ್ ಊರಿಗೆ ಹೋಗಲು ಸಾಗರ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಬಂದಿದ್ದರು. ಈ ಸಂದರ್ಭ ಸುಮಾರು 12 ಗ್ರಾಂ ತೂಕದ ಬಂಗಾರದ ಗಣಪತಿ ಡಾಲರ್ ಇದ್ದ ಚೈನ್‌ ಅನ್ನು ವ್ಯಾನಿಟಿ ಬ್ಯಾಗ್‌ನಲ್ಲಿ ಇಟ್ಟುಕೊಂಡಿದ್ದರು.

ಇದನ್ನೂ ಓದಿ – ಇನ್ಮುಂದೆ ಹೊಸ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಶಿವಮೊಗ್ಗ ಪೊಲೀಸ್‌, ಏನಿದು?

ಸೊರಬ – ಹಾನಗಲ್ ಮಾರ್ಗದ ಬಸ್ ಬಂದಾಗ ರಶ್ ಹೆಚ್ಚಾಗಿತ್ತು. ಜಯಮ್ಮ ಅವರು ನೂಕುನುಗ್ಗಲಿನಲ್ಲಿ ಬಸ್ಸಿನ ಹಿಂದಿನ ಬಾಗಿಲಿನಿಂದ ಹತ್ತಿ ಸೀಟಿನಲ್ಲಿ ಕುಳಿತಿದ್ದರು. ಬಳಿಕ ಬ್ಯಾಗ್ ಪರಿಶೀಲಿಸಿದಾಗ ಬಂಗಾರದ ಚೈನ್ ನಾಪತ್ತೆಯಾಗಿರುವುದು ಗೊತ್ತಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

KSRTC-Bus-General-Image-Shimoga-Bangalore

ಬಂಗಾರದ ಚೈನ್ ಸುಮಾರು 10 ವರ್ಷ ಹಿಂದೆ ಮಾಡಿಸಿದ್ದಾಗಿದ್ದು, ಅಂದಿನ ಮೌಲ್ಯ ಸುಮಾರು ₹48,000 ಎಂದು ತಿಳಿಸಲಾಗಿದೆ. ಸಾಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment