ಸಾಗರ ಮಾರಿಕಾಂಬಾ ದೇವಿ ಮೆರವಣಿಗೆ ನೋಡಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಆಘಾತ

ಸಾಗರ: ಇಲ್ಲಿನ ಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಿಯ ವನಕ್ಕೆ ಬಿಡುವ ಮೆರವಣಿಗೆಯ (procession) ಸಂದರ್ಭ ಕಳ್ಳರು ವ್ಯಕ್ತಿಯೊಬ್ಬರ ಕೊರಳಿನಲ್ಲಿದ್ದ ಚಿನ್ನದ ಸರ ಕಳ್ಳತನ ಮಾಡಿದ್ದಾರೆ. ಫೆಬ್ರವರಿ 12ರ ತಡರಾತ್ರಿ ಜೆ.ಸಿ. ರಸ್ತೆಯ ಶ್ರೀ ಕಾಳಿಕಾಂಬಾ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ

ಸಾಗರದ ಶ್ರೀಕಾಂತ್‌ ವಜ್ರ ಶೇಠ್‌ ಅವರು ಫೆಬ್ರವರಿ 12ರ ರಾತ್ರಿ 12.45 ರಿಂದ 1 ಗಂಟೆಯ ಸಮಯದಲ್ಲಿ ದೇವಿಯ ಮೆರವಣಿಗೆ ವೀಕ್ಷಿಸಲು ಕಾಳಿಕಾಂಬಾ ದೇವಸ್ಥಾನದ ಬಳಿ ನಿಂತಿದ್ದರು. ಈ ವೇಳೆ ಕಳ್ಳರು ಇವರ ಕೊರಳಿನಲ್ಲಿದ್ದ ಸುಮಾರು 19 ಗ್ರಾಂ ತೂಕದ ಬಂಗಾರದ ಚೈನ್ ಹಾಗೂ ಹವಳ ಸುತ್ತಿರುವ ಪದಕ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಮೆರವಣಿಗೆಯ ಗದ್ದಲದಲ್ಲಿ ಈ ಕೃತ್ಯ ನಡೆದಿದ್ದು, ಸರ ಕಳೆದುಕೊಂಡ ವಿಷಯ ತಡವಾಗಿ ಬೆಳಕಿಗೆ ಬಂದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Sagara Police Station Building

ಇದನ್ನೂ ಓದಿ – ಮೈಸೂರು – ತಾಳಗುಪ್ಪ ರೈಲುಗಳ ಕುರಿತು ಮಹತ್ವದ ಅಪ್‌ಡೇಟ್‌

ಕಳ್ಳತನವಾದ ಬಂಗಾರದ ಸರದ ಮೌಲ್ಯ ಸುಮಾರು ₹1,05,000 ಎಂದು ಅಂದಾಜಿಸಲಾಗಿದೆ. ಈ ಸಂಬಂಧ ಶ್ರೀಕಾಂತ್‌ ವಜ್ರ ಶೇಠ್‌ ದೂರು ನೀಡಿದ್ದಾರೆ. ಸಾಗರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Kalleshwara-Enterprises.webp
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment