ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: ಇಲ್ಲಿನ ಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಿಯ ವನಕ್ಕೆ ಬಿಡುವ ಮೆರವಣಿಗೆಯ (procession) ಸಂದರ್ಭ ಕಳ್ಳರು ವ್ಯಕ್ತಿಯೊಬ್ಬರ ಕೊರಳಿನಲ್ಲಿದ್ದ ಚಿನ್ನದ ಸರ ಕಳ್ಳತನ ಮಾಡಿದ್ದಾರೆ. ಫೆಬ್ರವರಿ 12ರ ತಡರಾತ್ರಿ ಜೆ.ಸಿ. ರಸ್ತೆಯ ಶ್ರೀ ಕಾಳಿಕಾಂಬಾ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ
ಸಾಗರದ ಶ್ರೀಕಾಂತ್ ವಜ್ರ ಶೇಠ್ ಅವರು ಫೆಬ್ರವರಿ 12ರ ರಾತ್ರಿ 12.45 ರಿಂದ 1 ಗಂಟೆಯ ಸಮಯದಲ್ಲಿ ದೇವಿಯ ಮೆರವಣಿಗೆ ವೀಕ್ಷಿಸಲು ಕಾಳಿಕಾಂಬಾ ದೇವಸ್ಥಾನದ ಬಳಿ ನಿಂತಿದ್ದರು. ಈ ವೇಳೆ ಕಳ್ಳರು ಇವರ ಕೊರಳಿನಲ್ಲಿದ್ದ ಸುಮಾರು 19 ಗ್ರಾಂ ತೂಕದ ಬಂಗಾರದ ಚೈನ್ ಹಾಗೂ ಹವಳ ಸುತ್ತಿರುವ ಪದಕ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಮೆರವಣಿಗೆಯ ಗದ್ದಲದಲ್ಲಿ ಈ ಕೃತ್ಯ ನಡೆದಿದ್ದು, ಸರ ಕಳೆದುಕೊಂಡ ವಿಷಯ ತಡವಾಗಿ ಬೆಳಕಿಗೆ ಬಂದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಮೈಸೂರು – ತಾಳಗುಪ್ಪ ರೈಲುಗಳ ಕುರಿತು ಮಹತ್ವದ ಅಪ್ಡೇಟ್
ಕಳ್ಳತನವಾದ ಬಂಗಾರದ ಸರದ ಮೌಲ್ಯ ಸುಮಾರು ₹1,05,000 ಎಂದು ಅಂದಾಜಿಸಲಾಗಿದೆ. ಈ ಸಂಬಂಧ ಶ್ರೀಕಾಂತ್ ವಜ್ರ ಶೇಠ್ ದೂರು ನೀಡಿದ್ದಾರೆ. ಸಾಗರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LATEST NEWS
- Three killed, several injured in soil cave-in at Hulikal Ghat

- BREAKING NEWS – ಹುಲಿಕಲ್ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

- PU RESULT: ಶಿವಮೊಗ್ಗದ ಮಹೀನ್ ಖಾನಮ್ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

- ಇವತ್ತಿನ ಅಡಿಕೆ ರೇಟ್, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

- ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

About The Editor
ನಿತಿನ್ ಆರ್.ಕೈದೊಟ್ಲು












