ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: ಇಲ್ಲಿನ ಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಿಯ ವನಕ್ಕೆ ಬಿಡುವ ಮೆರವಣಿಗೆಯ (procession) ಸಂದರ್ಭ ಕಳ್ಳರು ವ್ಯಕ್ತಿಯೊಬ್ಬರ ಕೊರಳಿನಲ್ಲಿದ್ದ ಚಿನ್ನದ ಸರ ಕಳ್ಳತನ ಮಾಡಿದ್ದಾರೆ. ಫೆಬ್ರವರಿ 12ರ ತಡರಾತ್ರಿ ಜೆ.ಸಿ. ರಸ್ತೆಯ ಶ್ರೀ ಕಾಳಿಕಾಂಬಾ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ
ಸಾಗರದ ಶ್ರೀಕಾಂತ್ ವಜ್ರ ಶೇಠ್ ಅವರು ಫೆಬ್ರವರಿ 12ರ ರಾತ್ರಿ 12.45 ರಿಂದ 1 ಗಂಟೆಯ ಸಮಯದಲ್ಲಿ ದೇವಿಯ ಮೆರವಣಿಗೆ ವೀಕ್ಷಿಸಲು ಕಾಳಿಕಾಂಬಾ ದೇವಸ್ಥಾನದ ಬಳಿ ನಿಂತಿದ್ದರು. ಈ ವೇಳೆ ಕಳ್ಳರು ಇವರ ಕೊರಳಿನಲ್ಲಿದ್ದ ಸುಮಾರು 19 ಗ್ರಾಂ ತೂಕದ ಬಂಗಾರದ ಚೈನ್ ಹಾಗೂ ಹವಳ ಸುತ್ತಿರುವ ಪದಕ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಮೆರವಣಿಗೆಯ ಗದ್ದಲದಲ್ಲಿ ಈ ಕೃತ್ಯ ನಡೆದಿದ್ದು, ಸರ ಕಳೆದುಕೊಂಡ ವಿಷಯ ತಡವಾಗಿ ಬೆಳಕಿಗೆ ಬಂದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಮೈಸೂರು – ತಾಳಗುಪ್ಪ ರೈಲುಗಳ ಕುರಿತು ಮಹತ್ವದ ಅಪ್ಡೇಟ್
ಕಳ್ಳತನವಾದ ಬಂಗಾರದ ಸರದ ಮೌಲ್ಯ ಸುಮಾರು ₹1,05,000 ಎಂದು ಅಂದಾಜಿಸಲಾಗಿದೆ. ಈ ಸಂಬಂಧ ಶ್ರೀಕಾಂತ್ ವಜ್ರ ಶೇಠ್ ದೂರು ನೀಡಿದ್ದಾರೆ. ಸಾಗರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್? | 20 ಫೆಬ್ರವರಿ 2026

- ಪತಿ ಆತ್ಮಹತ್ಯೆ ಮಾಡಿಕೊಂಡ ವಾರದಲ್ಲೆ ಪತ್ನಿಯೂ ನೇಣಿಗೆ ಶರಣು, ಘಟನೆಗೆ ಪೊಲೀಸ್ ಸಿಬ್ಬಂದಿ ಕಾರಣವಾ?

- ಶಿವಮೊಗ್ಗದಲ್ಲಿ ₹18,000 ಸಂಬಳದ ಕೆಲಸ ಖಾಲಿ ಇದೆ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

- ಶಿವಾಜಿ ಜಯಂತಿ ಮೆರವಣಿಗೆ ಮೇಲೆ ಕಲ್ಲು ತೂರಾಟ, ಶಿಕಾರಿಪುರದಲ್ಲಿ ವಿಜಯೇಂದ್ರ ಆಕ್ರೋಶ, ಏನಂದ್ರು?

- ಶಿಕಾರಿಪುರದಲ್ಲಿ ವಕೀಲ ನೇಣಿಗೆ ಶರಣು, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು






