ಉಡುಪಿ ವ್ಯಕ್ತಿಯನ್ನು ಅರೆಸ್ಟ್‌ ಮಾಡಿದ ತೀರ್ಥಹಳ್ಳಿಯ ಮಾಳೂರು ಪೊಲೀಸ್‌, ಯಾಕೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ತೀರ್ಥಹಳ್ಳಿ: ಮನೆಯ ಪಕ್ಕದಲ್ಲಿಟ್ಟಿದ್ದ ಕಬ್ಬಿಣದ ಸೆಂಟ್ರಿಂಗ್ ಶೀಟ್‌ಗಳನ್ನು (centring sheets) ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಯ ಕುಂಬ್ರಿಕೊಡ್ಲು ನಿವಾಸಿ ಮೊಹಿದ್ದೀನ್ (42) ಎಂಬಾತನನ್ನು ಬಂಧಿಸಲಾಗಿದೆ.

ಫೆ.2ರಂದು ತೀರ್ಥಹಳ್ಳಿ ತಾಲೂಕು ಕೂಡಿಗೆ ಗ್ರಾಮದ ಗಬಡಿಯ ಮೇಘರಾಜ್‌ ಎಂಬುವವರಿಗೆ ಸೇರಿದ್ದ ಕಬ್ಬಿಣದ ಶೀಟ್‌ಗಳನ್ನು ಕಳವು ಮಾಡಲಾಗಿತ್ತು. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಮಾಳೂರು ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ ಅಂದಾಜು ₹1 ಲಕ್ಷ ಮೌಲ್ಯದ ಒಟ್ಟು 150 ಕಬ್ಬಿಣದ ಸೆಂಟ್ರಿಂಗ್ ಶೀಟ್ ಹಾಗೂ ಅಂದಾಜು ₹1 ಲಕ್ಷ ಮೌಲ್ಯದ ಗೂಡ್ಸ್ ವಾಹನ ವಶಕ್ಕೆ ಪಡೆಯಲಾಗಿದೆ.

Thirthahalli-Maluru-police-arrest-one-from-Udupi.

ಈ ವೇಳೆ ಆನವಟ್ಟಿ ಠಾಣೆಯಲ್ಲಿ ಕಳೆದ ವರ್ಷ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 50 ಸೆಂಟ್ರಿಂಗ್‌ ಶೀಟ್‌ಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ – ಸಿಎಂಗೆ ಡಿಸಿಎಂ ಪತ್ರ, ಶಿವಮೊಗ್ಗದ ಇಬ್ಬರ ಹೆಸರು ಪ್ರಸ್ತಾಪ, ಆಕಾಂಕ್ಷಿಗಳಿಗೆ ನಿರಾಸೆ, ಏನಿದೆ ಪತ್ರದಲ್ಲಿ?

number-1-advt-copy-new.webp

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment