ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಚಂದ್ರ ಗ್ರಹಣ (lunar eclipse) ಮುಗಿಯುತ್ತಿದ್ದಂತೆ ಶಿವಮೊಗ್ಗ ನಗರದ ವಿವಿಧ ದೇವಸ್ಥಾನಗಳಿಗೆ ದೊಡ್ಡ ಸಂಖ್ಯೆಯ ಭಕ್ತರು ಹರಿದು ಬರುತ್ತಿದ್ದಾರೆ. ಮತ್ತೊಂದೆಡೆ ನಗರದ ವಿವಿಧೆಡೆ ಅಂಗಡಿಗಳು ಬಂದ್ ಆಗಿವೆ. ಜನ ಸಂಚಾರವು ತುಸು ಕಡಿಮೆಯಾಗಿದೆ.
ಚಂದ್ರ ಗ್ರಹಣ ದೇವಸ್ಥಾನಗಳು ಬಂದ್
ಚಂದ್ರ ಗ್ರಹಣ ಹಿನ್ನೆಲೆ ಶಿವಮೊಗ್ಗ ನಗರದ ದೇವಸ್ಥಾನಗಳು ಬಂದ್ ಆಗಿದ್ದವು. ಸಂಜೆ ಗ್ರಹಣ ಮುಗಿಯುವವರೆಗೆ ದೇವಸ್ಥಾನಗಳು ಖಾಲಿಯಾಗಿದ್ದವು. ಗ್ರಹಣದ ಬಳಿಕ ದೇವಸ್ಥಾನಗಳಲ್ಲಿ ಶುಚಿ ಕಾರ್ಯ ನಡೆಸಲಾಯಿತು, ದೇವರ ಮೂರ್ತಿಗಳನ್ನು ಶುದ್ಧಗೊಳಿಸಿ ಪೂಜೆ ನಡೆಸಲಾಯಿತು.
ಇದನ್ನೂ ಓದಿ – ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?
ದೊಡ್ಡ ಸಂಖ್ಯೆಯ ಭಕ್ತರು
ಗ್ರಹಣ ಮುಗಿಯುತ್ತಿದ್ದಂತೆ ಭಕ್ತರು ದೇವಸ್ಥಾನಗಳಿಗೆ ಆಗಮಿಸಿದರು. ಶಿವಮೊಗ್ಗ ನಗರದ ಎಲ್ಲ ಪ್ರಮುಖ ದೇವಸ್ಥಾನಗಳಿಗೆ ಭಕ್ತರಿಂದ ತುಂಬಿತ್ತು. ದುರ್ಗಿಗುಡಿಯ ಶ್ರೀ ದುರ್ಗಮ್ಮ, ಮರಿಯಮ್ಮ ದೇವಸ್ಥಾನದಲ್ಲಿ ಇವತ್ತು ರಥೋತ್ಸವ ಇತ್ತು. ಹಾಗಾಗಿ ಈ ದೇಗುಲಕ್ಕೆ ಭಕ್ತರ ಸಂಖ್ಯೆ ಹೆಚ್ಚಿತ್ತು.
ಅಂಗಡಿಗಳು ಬಂದ್, ಜನ ಸಂಚಾರ ಕಡಿಮೆ ಗ್ರಹಣದ ಕಾರಣಕ್ಕೆ ಶಿವಮೊಗ್ಗ ನಗರದಲ್ಲಿ ಹಲವು ಅಂಗಡಿಗಳು ಬಂದ್ ಆಗಿದ್ದವು. ತಿಂಡಿ, ತಿನಿಸು ಅಂಗಡಿಗಳು, ರಸ್ತೆ ಬದಿ ವ್ಯಾಪಾರಿಗಳು ಕೂಡ ಇವತ್ತು ವ್ಯಾಪಾರ ಮಾಡಲಿಲ್ಲ. ಇನ್ನು, ಸಿಟಿಯಲ್ಲಿ ಎಂದಿಗಿಂತಲು ವಾಹನ ಮತ್ತು ಜನ ಸಂಚಾರ ಕಡಿಮೆ ಇತ್ತು.

LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






