ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನ (JNNCE) ಸಾಂಸ್ಕೃತಿಕ ತಂಡವು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಏರ್ಪಡಿಸಿದ್ದ ಅಂತರ ಕಾಲೇಜು ಸಾಂಸ್ಕೃತಿಕ ಉತ್ಸವ ಯುಕ್ತಿ-2026 ನಲ್ಲಿ ಅಸಾಧಾರಣ ಪ್ರದರ್ಶನ ಚಾಂಪಿಯನ್ ಟ್ರೋಫಿ ಮುಡಿಗೇರಿಸಿಕೊಂಡಿದ್ದಾರೆ.
ಮೈಸೂರಿನ ವಿಟಿಯು ವಲಯ ಕೇಂದ್ರದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಛಾಯಾಗ್ರಹಣ ಸ್ಪರ್ಧೆಯಲ್ಲಿ ಭುವನ್.ಜಿ.ಆರ್ (ಪ್ರಥಮ), ಕೊಲಾಜ್ ಸ್ಪರ್ಧೆಯಲ್ಲಿ ಅಪೂರ್ವ ಹರೀಶ್ (ಪ್ರಥಮ), ಸಮೂಹ ಗಾಯನ ಸ್ಪರ್ಧೆಯಲ್ಲಿ ವಿಕಾಸ್.ಬಿ.ಎಚ್, ಮೈತ್ರೇಯಿ, ಲಿಂಗೇಶ್.ಆರ್, ಸಾನಿಧ್ಯ ಹಮ್ಮಿಗೆ, ಸಿಂಚನ. ಆರ್ ತಂಡ (ಪ್ರಥಮ), ರಂಗೋಲಿ ಸ್ಪರ್ಧೆಯಲ್ಲಿ ಅಪೂರ್ವ ಹರೀಶ್ (ದ್ವಿತೀಯ), ಸಮೂಹ ನೃತ್ಯ ಸ್ಪರ್ಧೆಯಲ್ಲಿ ಶರಧಿ, ಅಪೂರ್ವ ಹರೀಶ್, ಅನಿಶಾ, ಭುವನ್, ಶ್ರೀವಿದ್ಯಾ, ಅಮೂಲ್ಯ ಡುಮ್ಮರ್, ಇಂಪನಾ (ದ್ವಿತೀಯ), ಗಾಯನದಲ್ಲಿ ಮೈತ್ರೇಯಿ.ಬಿ.ಎ (ದ್ವಿತೀಯ) ಬಹುಮಾನ ಪಡೆದಿದ್ದಾರೆ.

ವಿಟಿಯು ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಂಗೋಲಿ ಸ್ಪರ್ಧೆಯಲ್ಲಿ ಅಪೂರ್ವ ಹರೀಶ್ (ಪ್ರಥಮ), ಸಮೂಹ ಗಾಯನ ಸ್ಪರ್ಧೆಯಲ್ಲಿ ವಿಕಾಸ್, ಅನುಶ್ರೀ, ಮೈತ್ರೇಯಿ, ಲಿಂಗೇಶ್, ರತನ್ ಕುಮಾರ್, ಯದುನಂದನ, ಸಾನಿಧ್ಯ ಹಮ್ಮಿಗೆ, ಸಿಂಚನ.ಆರ್ (ಪ್ರಥಮ), ಗಾಯನದಲ್ಲಿ ಅನುಶ್ರೀ.ಎಂ (ದ್ವಿತೀಯ), ಲೋಗೊ ವಿನ್ಯಾಸ ಸ್ಪರ್ಧೆಯಲ್ಲಿ ಭುವನ್.ಜಿ.ಆರ್ (ದ್ವಿತೀಯ) ಬಹುಮಾನ ಪಡೆದಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DVoR ಕೆಲಸ ಶುರು, ಏನಿದು? ಪ್ರಯೋಜನ ಏನು?
ಸಾಂಸ್ಕೃತಿಕ ವಿಭಾಗದ ಸಂಯೋಜಕರಾದ ಡಾ.ಶಶಿಕಿರಣ್ ತಂಡವನ್ನು ಮುನ್ನಡೆಸಿದರು. ವಿದ್ಯಾರ್ಥಿಗಳ ಈ ಸಾಧನೆಗೆ ರಾಷ್ಟ್ರೀಯ ಶಿಕ್ಷಣ ಸಮಿತಿ ಆಡಳಿತ ಮಂಡಳಿ ಸದಸ್ಯರು, ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ. ವಿಜಯಕುಮಾರ್ ಮತ್ತು ಸಿಬ್ಬಂದಿ ವರ್ಗ ಅಭಿನಂದಿಸಿದೆ.

LATEST NEWS
- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

About The Editor
ನಿತಿನ್ ಆರ್.ಕೈದೊಟ್ಲು





