ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

number-1-advt-copy-new.webp

ಶಿವಮೊಗ್ಗ: ಕೋಟೆ ಮಾರಿಕಾಂಬ ದೇವಸ್ಥಾನದ ಆವರಣದಲ್ಲಿ ದರ್ಶನಕ್ಕೆ ಬಂದಿದ್ದ ವೃದ್ಧೆಯೊಬ್ಬರ ಸುಮಾರು ₹4 ಲಕ್ಷ ಮೌಲ್ಯದ ಚಿನ್ನದ ಸರ (Gold Chain) ಕಳ್ಳತನ ಮಾಡಲಾಗಿದೆ. ಫೆಬ್ರವರಿ 28ರಂದು ಬೆಳಗ್ಗೆ ಜಾತ್ರಾ ಸಂದರ್ಭದಲ್ಲಿ ಈ ಕೃತ್ಯ ನಡೆದಿದ್ದು, ಈ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿನೋಬನಗರದ 60 ಅಡಿ ರಸ್ತೆಯ ನಿವಾಸಿ ಲಕ್ಷ್ಮಿ ದೇವಿ (75) ದೂರು ನೀಡಿದ್ದಾರೆ. ಫೆಬ್ರವರಿ 28ರಂದು ಬೆಳಿಗ್ಗೆ 6:45ರ ಸುಮಾರಿಗೆ ತಮ್ಮ ಮೊಮ್ಮಗ ದೇವ ಪ್ರಸಾದ್ ಜೊತೆಗೆ ಕೋಟೆ ಮಾರಿಕಾಂಬಾ ದೇವಿ ಜಾತ್ರೆಗೆ ಬಂದಿದ್ದರು. ಸರದಿ ಸಾಲಿನಲ್ಲಿ ನಿಂತು ಬೆಳಗ್ಗೆ 7:20ಕ್ಕೆ ದೇವರ ದರ್ಶನ ಪಡೆದ ಬಳಿಕ ದೇವಸ್ಥಾನದ ಆವರಣದಲ್ಲಿ ಕುಳಿತಿದ್ದಾಗ, ಕುತ್ತಿಗೆಯಲ್ಲಿದ್ದ ಸರ ನಾಪತ್ತೆಯಾಗಿರುವುದು ಗಮನಕ್ಕೆ ಬಂದಿದೆ.

ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್‌ನಲ್ಲಿ ಪಾಸ್‌, DVOR ಕೆಲಸ ಶುರು, ಏನಿದು? ಪ್ರಯೋಜನ ಏನು?

ಕಾಣೆಯಾದ ಬಂಗಾರದ ಸರವು ಸುಮಾರು 40 ಗ್ರಾಂ ತೂಕವಿತ್ತು. ಅದರ ಅಂದಾಜು ಮೌಲ್ಯ ₹4,00,000. ಸರ ಕಳ್ಳತನವಾದ ಆಘಾತದಿಂದ ದೂರುದಾರರು ಅಸ್ವಸ್ಥಗೊಂಡಿದ್ದ ಕಾರಣ, ಮನೆಗೆ ತೆರಳಿ ಚೇತರಿಸಿಕೊಂಡ ಬಳಿಕ ಠಾಣೆಗೆ ಬಂದು ದೂರು ನೀಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Sunrise Facility Services, Sri sai Trust Shimoga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : March 5, 2026 at 1:30 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಮಾರ್ಚ್ 5, 2026

Leave a Comment